Categories: CrimeLatest

6 ವರ್ಷಗಳ ಬಳಿಕವೂ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ; ಬಸ್ ಜಪ್ತಿಗೆ ಕೂಡ್ಲಿಗಿ ನ್ಯಾಯಾಲಯದ ಆದೇಶ

ಕೂಡ್ಲಿಗಿ (ವಿಜಯನಗರ): 2019ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯ ಆದೇಶಿಸಿದ್ದ ಪರಿಹಾರವನ್ನು ಹಲವು ವರ್ಷಗಳಾದರೂ ಪಾವತಿಸದ ಹಿನ್ನೆಲೆಯಲ್ಲಿ, ಕೆಎಸ್‌ಆರ್‌ಟಿಸಿ ಕೊಪ್ಪಳ ಡಿಪೋಗೆ ಸೇರಿದ ಬಸ್ ಅನ್ನು ಜಪ್ತಿ ಮಾಡುವಂತೆ ಕೂಡ್ಲಿಗಿ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

2019ರ ನವೆಂಬರ್ 10ರಂದು ತಾಲೂಕಿನ ಕ್ಯಾಸನಕೇರಿ ಗ್ರಾಮದ ನಾಗಪ್ಪ (55) ಅವರು ಟಾಟಾ ಏಸ್ ವಾಹನದಲ್ಲಿ ಹೊಸಪೇಟೆಯಿಂದ ಕೂಡ್ಲಿಗಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಶಿವಪುರ ಗ್ರಾಮದ ಸಮೀಪ ಎದುರಿನಿಂದ ಬಂದ ಕೊಪ್ಪಳ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ನಾಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದರು.

ಈ ಸಂಬಂಧ ಮೃತರ ಪತ್ನಿ ಕೊಟ್ರಮ್ಮ ನೀಡಿದ ದೂರಿನ ಮೇರೆಗೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ವಕೀಲ ಜಿ. ಸೀತಾರಾಮಗೌಡ ಅವರ ಮೂಲಕ ಕೂಡ್ಲಿಗಿ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ಬಳಿಕ 2020ರ ಅಕ್ಟೋಬರ್ 16ರಂದು ನ್ಯಾಯಾಲಯವು ಮೃತ ನಾಗಪ್ಪ ಅವರ ಕುಟುಂಬಕ್ಕೆ ₹12 ಲಕ್ಷ ಪರಿಹಾರವನ್ನು ಕೆಎಸ್‌ಆರ್‌ಟಿಸಿ ಕೊಪ್ಪಳ ಡಿಪೋ ಪಾವತಿಸಬೇಕೆಂದು ಆದೇಶಿಸಿತ್ತು. ಆದರೆ ಆದೇಶ ಹೊರಬಿದ್ದ ಹಲವು ವರ್ಷಗಳಾದರೂ ಪರಿಹಾರ ಹಣವನ್ನು ನೀಡದ ಕಾರಣ, ಸಂತ್ರಸ್ತರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ವಿಷಯವನ್ನು ತಂದಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹಿರಿಯ ಶ್ರೇಣಿ ನ್ಯಾಯಾಧೀಶ ಜೆ. ಯೋಗೇಶ್ ಅವರು ಕೆಎಸ್‌ಆರ್‌ಟಿಸಿ ಬಸ್ ಜಪ್ತಿಗೆ ಆದೇಶ ಹೊರಡಿಸಿದರು. ಅದರಂತೆ ಜುಲೈ 17ರಂದು ಕೊಪ್ಪಳ ಡಿಪೋಗೆ ಸೇರಿದ ಬಸ್ ಕೂಡ್ಲಿಗಿ ಬಸ್ ನಿಲ್ದಾಣಕ್ಕೆ ಬಂದ ತಕ್ಷಣ, ನ್ಯಾಯಾಲಯದ ಅಮೀನ್ ಸಿಬ್ಬಂದಿ ಹಾಗೂ ಸಂತ್ರಸ್ತರ ಪರ ವಕೀಲರ ಸಮ್ಮುಖದಲ್ಲಿ ಬಸ್ ಅನ್ನು ಕಾನೂನುಬದ್ಧವಾಗಿ ಜಪ್ತಿ ಮಾಡಿ ನ್ಯಾಯಾಲಯದ ಆವರಣಕ್ಕೆ ಕೊಂಡೊಯ್ಯಲಾಯಿತು.

ಜಪ್ತಿ ಕಾರ್ಯಾಚರಣೆಯಲ್ಲಿ ವಕೀಲರಾದ ಜಿ. ಸೀತಾರಾಮಗೌಡ, ಜಿ.ಎಂ. ಮಲ್ಲಿಕಾರ್ಜುನಯ್ಯ, ನ್ಯಾಯಾಲಯದ ಅಮೀನ್ ಸಿಬ್ಬಂದಿ ಕೊಟ್ರೇಶ್, ನಾಗರಾಜ್, ಶೇಖ್ ಅಬೂಬಕರ್ ಹಾಗೂ ಮೃತ ನಾಗಪ್ಪ ಅವರ ಪತ್ನಿ ಕೊಟ್ರಮ್ಮ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

ನ್ಯಾಯಾಲಯದ ಆದೇಶಗಳನ್ನು ಸರ್ಕಾರಿ ಸಂಸ್ಥೆಗಳು ಕೂಡ ಕಡ್ಡಾಯವಾಗಿ ಪಾಲಿಸಬೇಕೆಂಬ ಸಂದೇಶವನ್ನು ಈ ಕ್ರಮ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಭ್ರಷ್ಟರ ಬೇಟೆ

Recent Posts

ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ಆರೋಪ: ಕನ್ನಡ ಪರ ಹೋರಾಟಗಾರ ಬಸವರಾಜ ಪಡುಕೋಟೆ ಬಂಧನ! ವೈರಲ್ ಆಯ್ತು ವಿಡಿಯೋ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕನ್ನಡ ಪರ ಹೋರಾಟಗಾರ ಎಂದು ಗುರುತಿಸಲ್ಪಡುವ…

2 hours ago

ಕೋಟ್ಯಂತರ ರೂ. ವೆಚ್ಚದ ಸರ್ಕಾರಿ ನರ್ಸಿಂಗ್ ಶಾಲೆ ಕಟ್ಟಡಕ್ಕೆ ಎರಡು ವರ್ಷಗಳಿಂದ ಬೀಗ! ಸಾರ್ವಜನಿಕರ ಆಕ್ರೋಶ

ಬಳ್ಳಾರಿ: ಸಾರ್ವಜನಿಕರ ತೆರಿಗೆ ಹಣ ಹಾಗೂ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ (District Mineral Foundation - DMF) ನಿಧಿಯಿಂದ…

4 hours ago

24 ಗಂಟೆಯೊಳಗೆ ಚೈನ್ ಸ್ನಾಚರ್ ಬಂಧನ: ₹3 ಲಕ್ಷ ಮೌಲ್ಯದ ಚಿನ್ನದ ಸರ, ಬೈಕ್ ಹಾಗೂ ಮೊಬೈಲ್ ವಶ

ಮುರ್ಡೇಶ್ವರ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಚೈನ್ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮುರ್ಡೇಶ್ವರ ಪೊಲೀಸರು ಕೇವಲ 24 ಗಂಟೆಯೊಳಗೆ…

4 hours ago

ಹನಿಮೂನ್ ಗೆ ಕರೆದೊಯ್ದು ಪತಿಯನ್ನು ಕೊಂದ ಸೋನಂಗೆ ಸುಪ್ರೀಂ ಕೋರ್ಟ್‌ನಿಂದ ಎರಡು ಆಯ್ಕೆ…?

ನವದೆಹಲಿ: ಮೇಘಾಲಯದಲ್ಲಿ ಹನಿಮೂನ್ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿ ಅವರಿಗೆ ಸುಪ್ರೀಂ…

4 hours ago

ಇಬ್ಬರು ಪತ್ನಿಯರ ನಡುವೆ ಪತಿಯನ್ನು ಹಂಚಿದ ಪಂಚಾಯಿತಿ! ವಾರದ 3 ದಿನ ಒಬ್ಬಳಿಗೆ, 3 ದಿನ ಮತ್ತೊಬ್ಬಳಿಗೆ

ರಾಮ್‌ಪುರ: ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯ ತಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಟುಂಬ ಕಲಹಕ್ಕೆ ಸಂಬಂಧಿಸಿದ ಅಪರೂಪದ ತೀರ್ಪೊಂದು ಬೆಳಕಿಗೆ…

4 hours ago

ಲೈಂಗಿಕ ಕಿರುಕುಳ ಆರೋಪದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ: ‘ಆಕೆಯೇ ನನಗೆ ಚುಂಬಿಸಿ, ಅಪ್ಪಿಕೊಂಡಿದ್ದಳು’ ಡೆತ್‌ನೋಟ್‌ನಲ್ಲಿ ಹೊಸ ಆರೋಪ

ಹೈದರಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದ ಸಹ ತರಬೇತಿ ನಿರತ ಮಹಿಳಾ ಐಪಿಎಸ್ ಅಧಿಕಾರಿಗೆ…

4 hours ago