Categories: Latest

ಕಳೆದುಹೋದ ₹85 ಸಾವಿರ ಹಿಂತಿರುಗಿಸಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿ – ಪ್ರಾಮಾಣಿಕತೆಗೆ ಮೆಚ್ಚುಗೆ

ತಿಪಟೂರು ಘಟಕದ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಪ್ರಾಮಾಣಿಕ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ತಿಪಟೂರು ಘಟಕದ ವಾಹನ ಸಂಖ್ಯೆ 876 ಚನ್ನರಾಯಪಟ್ಟಣದಿಂದ ತಿಪಟೂರಿಗೆ ಮಧ್ಯಾಹ್ನ 1.15ಕ್ಕೆ ಪ್ರಯಾಣಿಸುತ್ತಿದ್ದ ವೇಳೆ, ರೂಪೇಶ್ ಎಂಬ ಪ್ರಯಾಣಿಕರು ಜಂಬೂರು ಬಳಿ ಇಳಿಯಲು ಬಸ್ಸಿಗೆ ಏರಿದ್ದರು.

ರೂಪೇಶ್ ಅವರು ತಮ್ಮ ವೈಯಕ್ತಿಕ ಸಮಸ್ಯೆಗಳಿಗಾಗಿ ಮುತ್ತೂಟ್ ಫೈನಾನ್ಸ್‌ನಲ್ಲಿ ಬಂಗಾರದ ಆಭರಣಗಳನ್ನು ಅಡವಿಟ್ಟು ₹85,000 ಹಣ ಪಡೆದು, ಅದನ್ನು ಪರ್ಸ್‌ನಲ್ಲಿ ಇಟ್ಟುಕೊಂಡು ಪ್ರಯಾಣಿಸುತ್ತಿದ್ದರು. ಆದರೆ, ಜಂಬೂರುದಲ್ಲಿ ಇಳಿಯುವಾಗ ತಮ್ಮ ಪರ್ಸ್ ಅನ್ನು ಬಸ್ಸಿನಲ್ಲೇ ಮರೆತು ಇಳಿದಿದ್ದರು.

ಬಸ್ ನುಗ್ಗೆಹಳ್ಳಿಗೆ ತಲುಪಿದ ಬಳಿಕ, ವಾರಸುದಾರರಿಲ್ಲದ ಸಂದರ್ಭದಲ್ಲಿ ನಿರ್ವಾಹಕರು ಪರ್ಸ್ ಪರಿಶೀಲಿಸಿದಾಗ ಅದರಲ್ಲಿ ₹85,000 ನಗದು ಹಾಗೂ ಪ್ರಮುಖ ದಾಖಲೆಗಳು ಇರುವುದನ್ನು ಗಮನಿಸಿದರು. ತಕ್ಷಣವೇ ಪರ್ಸ್‌ನಲ್ಲಿದ್ದ ಮಾಹಿತಿಯನ್ನು ಬಳಸಿ ರೂಪೇಶ್ ಅವರ ಮೊಬೈಲ್‌ಗೆ ಕರೆ ಮಾಡಿ ವಿಷಯ ತಿಳಿಸಿದರು. ಇದರಿಂದ ಹಣ ಕಳೆದುಕೊಂಡಿದ್ದ ರೂಪೇಶ್ ಆತಂಕದಿಂದ ಹೊರಬಂದು ನೆಮ್ಮದಿ ಪಡೆದರು.

ನಂತರ ರೂಪೇಶ್ ಅವರನ್ನು ತಿಪಟೂರು ಬಸ್ ನಿಲ್ದಾಣಕ್ಕೆ ಕರೆಸಿ, ನಿರ್ವಾಹಕ ದಯಾನಂದ್ ಹಾಗೂ ಚಾಲಕ ಜಗದೀಶ್ ಅವರು ಸಂಚಾರಿ ನಿಯಂತ್ರಕರ ಸಮ್ಮುಖದಲ್ಲಿ ಹಣ ಮತ್ತು ದಾಖಲೆಗಳನ್ನು ಸುರಕ್ಷಿತವಾಗಿ ಹಸ್ತಾಂತರಿಸಿದರು.

ಈ ಘಟನೆಗೆ ಪ್ರತಿಕ್ರಿಯೆ ನೀಡಿದ ರೂಪೇಶ್, “ನನ್ನ ಕಷ್ಟಕಾಲದಲ್ಲಿ ಹಣವನ್ನು ಹಿಂತಿರುಗಿಸಿದ ಚಾಲಕ ಮತ್ತು ನಿರ್ವಾಹಕರು ನನಗೆ ದೇವರ ಸಮಾನರು” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಪ್ರಾಮಾಣಿಕತೆಯನ್ನು ಮೆರೆದ ದಯಾನಂದ್ ಮತ್ತು ಜಗದೀಶ್ ಅವರ ಈ ನಡೆಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago