Latest

ಕುಂಭಮೇಳದ ನಕಲಿ ಶೇಖ್: ರೀಲ್ಸ್ ಸಾಹಸವೇ ಥಳಿತಕ್ಕೆ ಕಾರಣ!”

ಜನವರಿ 13ರಿಂದ ಆರಂಭವಾಗಿರುವ ಮಹಾಕುಂಭಮೇಳಕ್ಕೆ ಪ್ರತಿದಿನ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದು, ಮೇಳ ನೂತನ ದಾಖಲೆಗಳನ್ನು ಬರೆಯುತ್ತಿದೆ. ವಿಶೇಷವಾಗಿ ನಾಗಾಸಾಧುಗಳು ಮತ್ತು ವಿದೇಶಿಗರು ಹೆಚ್ಚು ಗಮನ ಸೆಳೆಯುತ್ತಿದ್ದು, ಈ ನಡುವೆ ಜನರ ಗಮನ ಸೆಳೆಯಲು ದುಬೈ ಶೇಖ್ನಂತೆ ಡ್ರೆಸ್ ಮಾಡಿಕೊಂಡ ವ್ಯಕ್ತಿಯೊಬ್ಬರು ಥಳಿತಕ್ಕೊಳಗಾದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ವೈರಲ್ ವಿಡಿಯೋ ಏನನ್ನು ತೋರಿಸುತ್ತದೆ?
ವಿಡಿಯೋದಲ್ಲಿ ದುಬೈ ಶೇಖ್ನಂತೆ ಡ್ರೆಸ್ ಮಾಡಿಕೊಂಡ ವ್ಯಕ್ತಿಯನ್ನು ಜನರು ಸುತ್ತುವರೆದಿರುವುದು ಮತ್ತು ಅವನ ಮೇಲೆ ಹಲ್ಲೆ ಮಾಡುವ ದೃಶ್ಯಗಳು ಕಾಣುತ್ತವೆ. ಜನರ ಕೋಪದಿಂದ ಆತ ತತ್ತರಿಸಿದಾಗ, ನಾಗಾಸಾಧುಗಳು ಅವನನ್ನು ರಕ್ಷಿಸುತ್ತಿರುವುದು ಸ್ಪಷ್ಟವಾಗುತ್ತದೆ. ಈ ಘಟನೆ ನಂತರ ವ್ಯಕ್ತಿಯ ವರ್ತನೆಗೆ ಹಲವರು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ವಿಷಯದ ಹಿನ್ನಲೆ:
ಈ ಘಟನೆ ರಾಜಸ್ಥಾನದ ವ್ಯಕ್ತಿಯೊಂದರಿಂದ ನಡೆದಿದೆ. ಕುಂಭಮೇಳದಲ್ಲಿ ಭಿನ್ನವಾಗಿ ಕಾಣಲು, ದುಬೈ ಶೇಖ್ನಂತೆ ಡ್ರೆಸ್ ಮಾಡಿಕೊಂಡು ಈತನ ಎಂಟ್ರಿ ಸಿಕ್ಕಿದ್ದು, ಪ್ರಾರಂಭದಲ್ಲಿ ಜನರು ಅವನೊಂದಿಗೆ ಫೋಟೋ ತೆಗೆಸಿಕೊಳ್ಳಲು ಉತ್ಸಾಹ ತೋರಿಸಿದ್ದಾರೆ. ಆದರೆ ಆತ ತನ್ನ ಹೆಸರನ್ನು “ಶೇಖ್ ಪ್ರೇಮಾನಂದ್” ಎಂದು ಪರಿಚಯಿಸಿಕೊಳ್ಳುತ್ತಿದ್ದಂತೆ ಜನರಿಗೆ ಅನುಮಾನ ಶುರುವಾಯಿತು.

ಜನರ ಕೋಪ ಮತ್ತು ನಾಗಾಸಾಧುಗಳ ರಕ್ಷಣೆ:
ಆತನ ಮಾತು ಸುಳ್ಳು ಎಂದು ಭಾಸವಾಗುತ್ತಿದ್ದಂತೆಯೇ ಜನರು ಆತನನ್ನು ಸುತ್ತುವರಿದು ಪ್ರಶ್ನಿಸುತ್ತಿದ್ದು, ಬಳಿಕ ಥಳಿತಕ್ಕೂ ಮುಂದಾಗಿದ್ದಾರೆ. ತಕ್ಷಣವೇ, ಸ್ಥಳದಲ್ಲಿದ್ದ ನಾಗಾಸಾಧುಗಳು ಆತನನ್ನು ರಕ್ಷಿಸಿದರು. ಬಳಿಕ ಆತ ರೀಲ್ಸ್ ಮಾಡಲು ಈ ರೀತಿ ತೊಡಗಿದ್ದಾಗಿ ಒಪ್ಪಿಕೊಂಡಿದ್ದಾನೆ.

ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯ ಅಜಾಗರೂಕ ವರ್ತನೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಜನರ ಕೋಪ, ನಾಗಾಸಾಧುಗಳ ಪರಿಪೂರ್ಣ ತಾಳ್ಮೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ಚರ್ಚೆ ಮಹಾಕುಂಭಮೇಳದ ಒಂದು ವಿಭಿನ್ನ ಕಥೆ ಆಗಿ ಹೊರಹೊಮ್ಮಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

15 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

20 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

20 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

20 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

20 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago