Latest

ಟ್ರಾಕ್ಟರ್ ಟ್ರೇಲರ್ ಕಳ್ಳರನ್ನು ಬಂದಿಸಿ, 6 ಟ್ರೇಲರ್ ವಶಪಡಿಸಿಕೊಳ್ಳವಲ್ಲಿ ಕುಂದಗೋಳ ಪೋಲಿಸರು ಯಶಸ್ವಿ.

ಕುಂದಗೋಳ: ಕುಂದಗೋಳ ತಾಲೂಕಿನ ವಿವಿಧೆಡೆ ಕಳ್ಳತನ ಮಾಡಿದ್ದ ಟ್ರಾಕ್ಟರ್ ಟ್ರೇಲರ್ ಕಳ್ಳರನ್ನು ಬಂದಿಸಿ 13.46 ಲಕ್ಷರೂ ಬೆಲೆ ಬಾಳುವ 6 ಟ್ರೇಲರ್ ವಶಪಡಿಸಿಕೊಳ್ಳವಲ್ಲಿ ಕುಂದಗೋಳ ಪೋಲಿಸರು ಯಶಸ್ವಿಯಾಗಿದ್ದಾರೆ.
ರೈತಾಪಿ ವರ್ಗದವರೂ ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಲ್ಪಡುವ ಟ್ರಾಕ್ಟರ್ ಟ್ರೇಲರ್ ಗಳನ್ನು ಕದೀಮರು ಕಳ್ಳತನಕ್ಕೆ ಮುಂದಾಗಿದ ಆರೋಪಿಗಳನ್ನು ಹೆಡೆಮುರಿ ಕಟ್ಟವುಲ್ಲಿ ಪೋಲೀಸರು ಸಕ್ಸಸ್. ಈ ಕುರಿತು ಕುಂದಗೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರವಾಡ ಎಸ್ ಪಿ ಡಾ ಗೋಪಾಲ ಬ್ಯಾಕೋಡ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಎನ್. ಬಿ. ಭರಮನಿ ಪೋಲಿಸ್ ಉಪಾಧೀಕ್ಷಕ ಶಿವಾನಂದ ಕಟಗಿ, ಅವರ ಮಾರ್ಗದರ್ಶನದಲ್ಲಿ ಕುಂದಗೋಳ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಾನಂದ ಅಂಬಿಗೇರ ನೇತ್ರತ್ವದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.
ಇಂದು ಏ 12 ರಂದು ಬೆಳಿಗ್ಗೆ 2:30 ರ ಸುಮಾರಿಗೆ ಕುಂದಗೋಳ ಪಟ್ಟಣದ ಕಾಳಿದಾಸ ನಗರದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಆರೋಪಿಗಳು ಟ್ರಾಕ್ಟರ್ ಟ್ರೇಲರ್ ಕಳ್ಳತನ ಮಾಡಿರುವುದು ತಪ್ಪೂಪಿಕೊಂಡಿದ್ದಾರೆ
ಕುಂದಗೋಳ ಪಟ್ಟಣ, ಬೆನಕನಹಳ್ಳಿ, ಶಿರೂರ, ಇನಾಮಕೊಪ್ಪ ಗ್ರಾಮಗಳಲ್ಲಿ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹಾಗೂ ಗದಗ ಜಿಲ್ಲೆ ರೋಣ ತಾಲೂಕಿನ ಬೆಳವಣಿಕಿ, ಮಲ್ಲಾಪುರ ಟ್ರೇಲರ್ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾರೆ.
ಸದರಿ ಆರೋಪಿಗಳಿಂದ ಒಟ್ಟು 13.40 ಲಕ್ಷ ರೂ ಮೌಲ್ಯದ 6 ಟ್ರೇಲರ್ ಹಾಗೂ 1 ನೀರಿನ ಟ್ಯಾಂಕರ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 2 ಟ್ರಾಕ್ಟರ್ ಇಂಜಿನ್ ಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತನಿಖಾ ತಂಡದಲ್ಲಿ ಪಿಎಸ್ಐ ಆರ್.ಸಿ.ದೊಡ್ಡಮನಿ, ಮಂಜುಳಾ ಸದಾರಿಯವರ, ಇಮ್ರಾನ್ ಪಠಾಣ ಹಾಗೂ ಸಿಬ್ಬಂದಿಗಳಾದ ಚಂದ್ರು ಬಡಿಗೇರ, ಬಸವರಾಜ ಶಿರಕೋಳ, ಮಡಿವಾಳ ಜೋಡಗೇರಿ, ಪರಮೇಶಿ ಗೊಂದಿ, ಶಂಕರ ಮುತ್ತಲಗೇರಿ, ಮಲಗೌಡ ಪಾಟೀಲ್, ಮೌನೇಶ ಗಲಗ, ಮಣಿಚಂದ್ರ ಗೋಣಿನವರ, ಅರುಣ ಹಾವಾಡಿ, ಉದಯ ಕಮ್ಮಾರ, ತಾಂತ್ರಿಕ ಸಿಬ್ಬಂದಿ ಆರೀಫ್ ಗೋಲಂದಾಜ, ವಿಠ್ಠಲ ಡಂಗನವರ ಇದ್ದಾರೆ. ಇವರ ಕಾರ್ಯವನ್ನು ಮೇಲಾಧಿಕಾರಿಗಳು ಪ್ರಶಂಸಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago