ಕುಂದಗೋಳ: ಕುಂದಗೋಳ ತಾಲೂಕಿನ ವಿವಿಧೆಡೆ ಕಳ್ಳತನ ಮಾಡಿದ್ದ ಟ್ರಾಕ್ಟರ್ ಟ್ರೇಲರ್ ಕಳ್ಳರನ್ನು ಬಂದಿಸಿ 13.46 ಲಕ್ಷರೂ ಬೆಲೆ ಬಾಳುವ 6 ಟ್ರೇಲರ್ ವಶಪಡಿಸಿಕೊಳ್ಳವಲ್ಲಿ ಕುಂದಗೋಳ ಪೋಲಿಸರು ಯಶಸ್ವಿಯಾಗಿದ್ದಾರೆ.
ರೈತಾಪಿ ವರ್ಗದವರೂ ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಲ್ಪಡುವ ಟ್ರಾಕ್ಟರ್ ಟ್ರೇಲರ್ ಗಳನ್ನು ಕದೀಮರು ಕಳ್ಳತನಕ್ಕೆ ಮುಂದಾಗಿದ ಆರೋಪಿಗಳನ್ನು ಹೆಡೆಮುರಿ ಕಟ್ಟವುಲ್ಲಿ ಪೋಲೀಸರು ಸಕ್ಸಸ್. ಈ ಕುರಿತು ಕುಂದಗೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರವಾಡ ಎಸ್ ಪಿ ಡಾ ಗೋಪಾಲ ಬ್ಯಾಕೋಡ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಎನ್. ಬಿ. ಭರಮನಿ ಪೋಲಿಸ್ ಉಪಾಧೀಕ್ಷಕ ಶಿವಾನಂದ ಕಟಗಿ, ಅವರ ಮಾರ್ಗದರ್ಶನದಲ್ಲಿ ಕುಂದಗೋಳ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಾನಂದ ಅಂಬಿಗೇರ ನೇತ್ರತ್ವದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.
ಇಂದು ಏ 12 ರಂದು ಬೆಳಿಗ್ಗೆ 2:30 ರ ಸುಮಾರಿಗೆ ಕುಂದಗೋಳ ಪಟ್ಟಣದ ಕಾಳಿದಾಸ ನಗರದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಆರೋಪಿಗಳು ಟ್ರಾಕ್ಟರ್ ಟ್ರೇಲರ್ ಕಳ್ಳತನ ಮಾಡಿರುವುದು ತಪ್ಪೂಪಿಕೊಂಡಿದ್ದಾರೆ
ಕುಂದಗೋಳ ಪಟ್ಟಣ, ಬೆನಕನಹಳ್ಳಿ, ಶಿರೂರ, ಇನಾಮಕೊಪ್ಪ ಗ್ರಾಮಗಳಲ್ಲಿ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹಾಗೂ ಗದಗ ಜಿಲ್ಲೆ ರೋಣ ತಾಲೂಕಿನ ಬೆಳವಣಿಕಿ, ಮಲ್ಲಾಪುರ ಟ್ರೇಲರ್ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾರೆ.
ಸದರಿ ಆರೋಪಿಗಳಿಂದ ಒಟ್ಟು 13.40 ಲಕ್ಷ ರೂ ಮೌಲ್ಯದ 6 ಟ್ರೇಲರ್ ಹಾಗೂ 1 ನೀರಿನ ಟ್ಯಾಂಕರ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 2 ಟ್ರಾಕ್ಟರ್ ಇಂಜಿನ್ ಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತನಿಖಾ ತಂಡದಲ್ಲಿ ಪಿಎಸ್ಐ ಆರ್.ಸಿ.ದೊಡ್ಡಮನಿ, ಮಂಜುಳಾ ಸದಾರಿಯವರ, ಇಮ್ರಾನ್ ಪಠಾಣ ಹಾಗೂ ಸಿಬ್ಬಂದಿಗಳಾದ ಚಂದ್ರು ಬಡಿಗೇರ, ಬಸವರಾಜ ಶಿರಕೋಳ, ಮಡಿವಾಳ ಜೋಡಗೇರಿ, ಪರಮೇಶಿ ಗೊಂದಿ, ಶಂಕರ ಮುತ್ತಲಗೇರಿ, ಮಲಗೌಡ ಪಾಟೀಲ್, ಮೌನೇಶ ಗಲಗ, ಮಣಿಚಂದ್ರ ಗೋಣಿನವರ, ಅರುಣ ಹಾವಾಡಿ, ಉದಯ ಕಮ್ಮಾರ, ತಾಂತ್ರಿಕ ಸಿಬ್ಬಂದಿ ಆರೀಫ್ ಗೋಲಂದಾಜ, ವಿಠ್ಠಲ ಡಂಗನವರ ಇದ್ದಾರೆ. ಇವರ ಕಾರ್ಯವನ್ನು ಮೇಲಾಧಿಕಾರಿಗಳು ಪ್ರಶಂಸಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…