ರೋಹಿಣಿ ಸಿಂಧೂರಿ(ಐಎಎಸ್) ಮತ್ತು ಡಿ. ರೂಪಾ(ಐಪಿಎಸ್) ನಡುವಿನ ಜಟಾಪಟಿಗೆ ಆತ್ಮಹತ್ಯೆ ಮಾಡಿಕೊಂಡ ಡಿ.ಕೆ. ರವಿ(ಐಎಎಸ್) ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಎಂಟ್ರಿ ಕೊಟ್ಟಿದ್ದಾರೆ. ಸಿಂಧೂರಿರವರ ವಿರುದ್ಧ ರೂಪಾರವರು ೧೯ ಗಂಭೀರ ಆರೋಪಗಳನ್ನು ಮಾಡಿದ್ದು, ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರ ಹಾಗೂ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಇನ್ನು ಹಲವು ವಿಚಾರಗಳನ್ನು ಹೇಳಿದ್ದರು.
ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿರವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.
ʻʻನನ್ನ ಪ್ರಶ್ನೆ ಇಷ್ಟೇ, ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ರೂಪಾ ಕೇಳಿದ್ದಾರೆ.
ಈ ಎಲ್ಲಾ ಆರೋಪಗಳ ಚರ್ಚೆಗಳನ್ನು ನೋಡುತ್ತಿದ್ದ ಡಿಕೆ ರವಿ ರವರ ಪತ್ನಿ ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮರವರು ಈ ವಿಚಾರದ ಯಾವುದೇ ಉಲ್ಲೇಖವನ್ನು ಮಾಡದೆ ತಮ್ಮ ಟ್ವಿಟರ್ ಖಾತೆಯಲ್ಲಿ
“ Karma will get back at you , sooner or later it surely will ” ಕರ್ಮವು ತಮಗೆ ಹಿಂತಿರುಗುತ್ತದೆ, ಬೇಗ ಅಥವಾ ತಡವಾಗಿ, ಬರುವುದು ಖಚಿತ. ಎಂದು ಬರೆದಿದ್ದಾರೆ.
ಕುಸುಮಾ ರವರ ಟ್ವಿಟ್ಗೆ ಪ್ರತಿಕ್ರಿಯಿಸಿರುವ ರೂಪಾ ರವರು ಈ ರೀತಿ ಬರೆದುಕೊಂಡಿರುತ್ತಾರೆ.
“ಕುಸುಮಾ, ಒಬ್ಬ ಮಹಿಳೆಯಾಗಿ ನಿನ್ನ ನೋವು ನನಗೆ ಅರ್ಥವಾಗುತ್ತದೆ. ಮತ್ತು ಅನೇಕ ಇತರ ಮಹಿಳೆಯರ ನೋವು (ಅವರಲ್ಲಿ ಕೆಲವರು ಐಎಎಸ್ನಲ್ಲಿ), ಇನ್ನೂ ಅಸಹಾಯಕರಾಗಿದ್ದಾರೆ. ಆದರೆ ಅಂತಿಮವಾಗಿ, ಯಾರಾದರೂ ಅಪರಾಧಿಯ ವಿರುದ್ಧ ನಿಲ್ಲಬೇಕು (ಅವಳು ಮಹಿಳೆಯಾಗಿದ್ದರೂ ಸಹ). ಈ ವಿಷಯದಲ್ಲಿ ನಿಮ್ಮೊಂದಿಗೆ. ಮರುಕಳಿಸದಂತೆ ದೇವರು ಅವಳಿಗೆ ಸಹಾನುಭೂತಿ ಮತ್ತು ಸದ್ಬುದ್ಧಿಯನ್ನು ನೀಡಲಿ.” ಎಂದು ಬರೆದಿದ್ದಾರೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…