Latest

ರೂಪಾ-ರೋಹಿಣಿ ಜಗಳದಲ್ಲಿ ಕುಸುಮಾ ಎಂಟ್ರಿ!

ರೋಹಿಣಿ ಸಿಂಧೂರಿ(ಐಎಎಸ್‌) ಮತ್ತು ಡಿ. ರೂಪಾ(ಐಪಿಎಸ್‌) ನಡುವಿನ ಜಟಾಪಟಿಗೆ ಆತ್ಮಹತ್ಯೆ ಮಾಡಿಕೊಂಡ ಡಿ.ಕೆ. ರವಿ(ಐಎಎಸ್‌) ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಎಂಟ್ರಿ ಕೊಟ್ಟಿದ್ದಾರೆ. ಸಿಂಧೂರಿರವರ ವಿರುದ್ಧ ರೂಪಾರವರು ೧೯ ಗಂಭೀರ ಆರೋಪಗಳನ್ನು ಮಾಡಿದ್ದು, ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರ ಹಾಗೂ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಇನ್ನು ಹಲವು ವಿಚಾರಗಳನ್ನು ಹೇಳಿದ್ದರು.
ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿರವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್‌ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.
ʻʻನನ್ನ ಪ್ರಶ್ನೆ ಇಷ್ಟೇ, ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ರೂಪಾ ಕೇಳಿದ್ದಾರೆ.
ಈ ಎಲ್ಲಾ ಆರೋಪಗಳ ಚರ್ಚೆಗಳನ್ನು ನೋಡುತ್ತಿದ್ದ ಡಿಕೆ ರವಿ ರವರ ಪತ್ನಿ ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮರವರು ಈ ವಿಚಾರದ ಯಾವುದೇ ಉಲ್ಲೇಖವನ್ನು ಮಾಡದೆ ತಮ್ಮ ಟ್ವಿಟರ್ ಖಾತೆಯಲ್ಲಿ

“ Karma will get back at you , sooner or later it surely will ” ಕರ್ಮವು ತಮಗೆ ಹಿಂತಿರುಗುತ್ತದೆ, ಬೇಗ ಅಥವಾ ತಡವಾಗಿ, ಬರುವುದು ಖಚಿತ. ಎಂದು ಬರೆದಿದ್ದಾರೆ.

ಕುಸುಮಾ ರವರ ಟ್ವಿಟ್ಗೆ ಪ್ರತಿಕ್ರಿಯಿಸಿರುವ ರೂಪಾ ರವರು ಈ ರೀತಿ ಬರೆದುಕೊಂಡಿರುತ್ತಾರೆ.

“ಕುಸುಮಾ, ಒಬ್ಬ ಮಹಿಳೆಯಾಗಿ ನಿನ್ನ ನೋವು ನನಗೆ ಅರ್ಥವಾಗುತ್ತದೆ. ಮತ್ತು ಅನೇಕ ಇತರ ಮಹಿಳೆಯರ ನೋವು (ಅವರಲ್ಲಿ ಕೆಲವರು ಐಎಎಸ್‌ನಲ್ಲಿ), ಇನ್ನೂ ಅಸಹಾಯಕರಾಗಿದ್ದಾರೆ. ಆದರೆ ಅಂತಿಮವಾಗಿ, ಯಾರಾದರೂ ಅಪರಾಧಿಯ ವಿರುದ್ಧ ನಿಲ್ಲಬೇಕು (ಅವಳು ಮಹಿಳೆಯಾಗಿದ್ದರೂ ಸಹ). ಈ ವಿಷಯದಲ್ಲಿ ನಿಮ್ಮೊಂದಿಗೆ. ಮರುಕಳಿಸದಂತೆ ದೇವರು ಅವಳಿಗೆ ಸಹಾನುಭೂತಿ ಮತ್ತು ಸದ್ಬುದ್ಧಿಯನ್ನು ನೀಡಲಿ.”  ಎಂದು ಬರೆದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

6 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

6 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

6 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

6 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

15 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

15 hours ago