ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಶ್ರೀಕಾಂತ್ ಕುಮಾರ್ ದತ್ತಾ ಇದೀಗ ಅಧಿಕಾರಿಗಳ ಎದುರು ಪ್ರತಿಭಟನೆ ಮಾಡಿದ್ದಾರೆ. ಶ್ರೀಕಾಂತ್ ದತ್ತಾ ಅವರ ಪಡಿತರ ಚೀಟಿಯಲ್ಲಿನ ತಪ್ಪು ಅವರ ಈ ಸಿಟ್ಟಿಗೆ ಕಾರಣವಾಗಿದೆ.
ಶ್ರೀಕಾಂತ್ ಅವರ ಪಡಿತರ ಚೀಟಿಯಲ್ಲಿ ದತ್ತಾ ಬದಲಿಗೆ ಕುತ್ತಾ ಎಂದು ಬರೆಯಲಾಗಿದೆ. ಪಡಿತರ ಚೀಟಿಯಲ್ಲಿನ ಈ ತಪ್ಪಿನಿಂದಾಗಿ ಶ್ರೀಕಾಂತ್ ತೀವ್ರ ಕೋಪಗೊಂಡರು. ಈ ವೇಳೆ ಬಿಡಿಒ ಅವರ ಮುಂದೆ ಬೊಗಳಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಇದೆಲ್ಲ ಕ್ಯಾಮರಾದಲ್ಲಿ ಸೆರೆಯಾಗುತ್ತಿತ್ತು. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯ ನಂತರ, ಪಡಿತರ ಚೀಟಿಯಲ್ಲಿ ನನ್ನ ಉಪನಾಮವನ್ನು ಮೂರು ಬಾರಿ ತಪ್ಪಾಗಿ ಬರೆಯಲಾಗಿದೆ ಎಂದು ಶ್ರೀಕಾಂತ್ ದತ್ತಾ ಹೇಳಿದ್ದಾರೆ. ಮೊದಲ ಎರಡು ಬಾರಿ ಶ್ರೀಕಾಂತ್ ಮಂಡಲ್ ಮತ್ತು ಶ್ರೀಕಾಂತಿ ಎಂದು ಬರೆದಿದ್ದರೆ ಈ ಬಾರಿ ಶ್ರೀಕಾಂತ್ ದತ್ತಾ ಎಂಬ ನನ್ನ ಹೆಸರನ್ನು ಶ್ರೀಕಾಂತ್ ಕುತ್ತಾ ಎಂದು ಬರೆಯಲಾಗಿದೆ. ನಾನು ಮತ್ತೆ ಅರ್ಜಿ ಹಾಕಿದೆ, ಅಲ್ಲಿ ನಾನು ಜಂಟಿ BDO ಅವರನ್ನು ನೋಡಿದೆ, ಆಗ ನನ್ನ ಸಿಟ್ಟನ್ನು ಹೊರಹಾಕಿದೆ ಎಂದಿದ್ದಾರೆ. ಆದರೆ ಅವರು ನನ್ನ ಪ್ರಶ್ನೆಗೆ ಉತ್ತರಿಸದೆ ಅಲ್ಲಿಂದ ಹೊರಟು ಹೋದರು. ನಮ್ಮಂತಹ ಜನಸಾಮಾನ್ಯರು ಎಷ್ಟು ಬಾರಿ ಕೆಲಸ ಬಿಟ್ಟು ಈ ರೀತಿಯ ತಪ್ಪುಗಳನ್ನು ತಿದ್ದಲು ಅರ್ಜಿ ಸಲ್ಲಿಸಲು ಹೋಗುತ್ತಾರೆ ಹೇಳಿ! ಎಂದು ಹೇಳಿದರು. ಈ ಸಂಪೂರ್ಣ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…