Latest

ರೇಷನ್ ಕಾರ್ಡ್ ನಲ್ಲಿ ದತ್ತ ಬದಲು ಕುತ್ತಾ; ಸಿಟ್ಟಿಗೆದ್ದು ಅಧಿಕಾರಿಯ ಮುಂದೆ ಬೊಗಳಿದ ವ್ಯಕ್ತಿ.

ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಶ್ರೀಕಾಂತ್ ಕುಮಾರ್ ದತ್ತಾ ಇದೀಗ ಅಧಿಕಾರಿಗಳ ಎದುರು ಪ್ರತಿಭಟನೆ ಮಾಡಿದ್ದಾರೆ. ಶ್ರೀಕಾಂತ್ ದತ್ತಾ ಅವರ ಪಡಿತರ ಚೀಟಿಯಲ್ಲಿನ ತಪ್ಪು ಅವರ ಈ ಸಿಟ್ಟಿಗೆ ಕಾರಣವಾಗಿದೆ.
ಶ್ರೀಕಾಂತ್ ಅವರ ಪಡಿತರ ಚೀಟಿಯಲ್ಲಿ ದತ್ತಾ ಬದಲಿಗೆ ಕುತ್ತಾ ಎಂದು ಬರೆಯಲಾಗಿದೆ. ಪಡಿತರ ಚೀಟಿಯಲ್ಲಿನ ಈ ತಪ್ಪಿನಿಂದಾಗಿ ಶ್ರೀಕಾಂತ್ ತೀವ್ರ ಕೋಪಗೊಂಡರು. ಈ ವೇಳೆ ಬಿಡಿಒ ಅವರ ಮುಂದೆ ಬೊಗಳಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಇದೆಲ್ಲ ಕ್ಯಾಮರಾದಲ್ಲಿ ಸೆರೆಯಾಗುತ್ತಿತ್ತು. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯ ನಂತರ, ಪಡಿತರ ಚೀಟಿಯಲ್ಲಿ ನನ್ನ ಉಪನಾಮವನ್ನು ಮೂರು ಬಾರಿ ತಪ್ಪಾಗಿ ಬರೆಯಲಾಗಿದೆ ಎಂದು ಶ್ರೀಕಾಂತ್ ದತ್ತಾ ಹೇಳಿದ್ದಾರೆ. ಮೊದಲ ಎರಡು ಬಾರಿ ಶ್ರೀಕಾಂತ್ ಮಂಡಲ್ ಮತ್ತು ಶ್ರೀಕಾಂತಿ ಎಂದು ಬರೆದಿದ್ದರೆ ಈ ಬಾರಿ ಶ್ರೀಕಾಂತ್ ದತ್ತಾ ಎಂಬ ನನ್ನ ಹೆಸರನ್ನು ಶ್ರೀಕಾಂತ್ ಕುತ್ತಾ ಎಂದು ಬರೆಯಲಾಗಿದೆ. ನಾನು ಮತ್ತೆ ಅರ್ಜಿ ಹಾಕಿದೆ, ಅಲ್ಲಿ ನಾನು ಜಂಟಿ BDO ಅವರನ್ನು ನೋಡಿದೆ, ಆಗ ನನ್ನ ಸಿಟ್ಟನ್ನು ಹೊರಹಾಕಿದೆ ಎಂದಿದ್ದಾರೆ. ಆದರೆ ಅವರು ನನ್ನ ಪ್ರಶ್ನೆಗೆ ಉತ್ತರಿಸದೆ ಅಲ್ಲಿಂದ ಹೊರಟು ಹೋದರು. ನಮ್ಮಂತಹ ಜನಸಾಮಾನ್ಯರು ಎಷ್ಟು ಬಾರಿ ಕೆಲಸ ಬಿಟ್ಟು ಈ ರೀತಿಯ ತಪ್ಪುಗಳನ್ನು ತಿದ್ದಲು ಅರ್ಜಿ ಸಲ್ಲಿಸಲು ಹೋಗುತ್ತಾರೆ ಹೇಳಿ! ಎಂದು ಹೇಳಿದರು. ಈ ಸಂಪೂರ್ಣ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago