ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಶ್ರೀಕಾಂತ್ ಕುಮಾರ್ ದತ್ತಾ ಇದೀಗ ಅಧಿಕಾರಿಗಳ ಎದುರು ಪ್ರತಿಭಟನೆ ಮಾಡಿದ್ದಾರೆ. ಶ್ರೀಕಾಂತ್ ದತ್ತಾ ಅವರ ಪಡಿತರ ಚೀಟಿಯಲ್ಲಿನ ತಪ್ಪು ಅವರ ಈ ಸಿಟ್ಟಿಗೆ ಕಾರಣವಾಗಿದೆ.
ಶ್ರೀಕಾಂತ್ ಅವರ ಪಡಿತರ ಚೀಟಿಯಲ್ಲಿ ದತ್ತಾ ಬದಲಿಗೆ ಕುತ್ತಾ ಎಂದು ಬರೆಯಲಾಗಿದೆ. ಪಡಿತರ ಚೀಟಿಯಲ್ಲಿನ ಈ ತಪ್ಪಿನಿಂದಾಗಿ ಶ್ರೀಕಾಂತ್ ತೀವ್ರ ಕೋಪಗೊಂಡರು. ಈ ವೇಳೆ ಬಿಡಿಒ ಅವರ ಮುಂದೆ ಬೊಗಳಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಇದೆಲ್ಲ ಕ್ಯಾಮರಾದಲ್ಲಿ ಸೆರೆಯಾಗುತ್ತಿತ್ತು. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯ ನಂತರ, ಪಡಿತರ ಚೀಟಿಯಲ್ಲಿ ನನ್ನ ಉಪನಾಮವನ್ನು ಮೂರು ಬಾರಿ ತಪ್ಪಾಗಿ ಬರೆಯಲಾಗಿದೆ ಎಂದು ಶ್ರೀಕಾಂತ್ ದತ್ತಾ ಹೇಳಿದ್ದಾರೆ. ಮೊದಲ ಎರಡು ಬಾರಿ ಶ್ರೀಕಾಂತ್ ಮಂಡಲ್ ಮತ್ತು ಶ್ರೀಕಾಂತಿ ಎಂದು ಬರೆದಿದ್ದರೆ ಈ ಬಾರಿ ಶ್ರೀಕಾಂತ್ ದತ್ತಾ ಎಂಬ ನನ್ನ ಹೆಸರನ್ನು ಶ್ರೀಕಾಂತ್ ಕುತ್ತಾ ಎಂದು ಬರೆಯಲಾಗಿದೆ. ನಾನು ಮತ್ತೆ ಅರ್ಜಿ ಹಾಕಿದೆ, ಅಲ್ಲಿ ನಾನು ಜಂಟಿ BDO ಅವರನ್ನು ನೋಡಿದೆ, ಆಗ ನನ್ನ ಸಿಟ್ಟನ್ನು ಹೊರಹಾಕಿದೆ ಎಂದಿದ್ದಾರೆ. ಆದರೆ ಅವರು ನನ್ನ ಪ್ರಶ್ನೆಗೆ ಉತ್ತರಿಸದೆ ಅಲ್ಲಿಂದ ಹೊರಟು ಹೋದರು. ನಮ್ಮಂತಹ ಜನಸಾಮಾನ್ಯರು ಎಷ್ಟು ಬಾರಿ ಕೆಲಸ ಬಿಟ್ಟು ಈ ರೀತಿಯ ತಪ್ಪುಗಳನ್ನು ತಿದ್ದಲು ಅರ್ಜಿ ಸಲ್ಲಿಸಲು ಹೋಗುತ್ತಾರೆ ಹೇಳಿ! ಎಂದು ಹೇಳಿದರು. ಈ ಸಂಪೂರ್ಣ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…
ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…