ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಶ್ರೀಕಾಂತ್ ಕುಮಾರ್ ದತ್ತಾ ಇದೀಗ ಅಧಿಕಾರಿಗಳ ಎದುರು ಪ್ರತಿಭಟನೆ ಮಾಡಿದ್ದಾರೆ. ಶ್ರೀಕಾಂತ್ ದತ್ತಾ ಅವರ ಪಡಿತರ ಚೀಟಿಯಲ್ಲಿನ ತಪ್ಪು ಅವರ ಈ ಸಿಟ್ಟಿಗೆ ಕಾರಣವಾಗಿದೆ.
ಶ್ರೀಕಾಂತ್ ಅವರ ಪಡಿತರ ಚೀಟಿಯಲ್ಲಿ ದತ್ತಾ ಬದಲಿಗೆ ಕುತ್ತಾ ಎಂದು ಬರೆಯಲಾಗಿದೆ. ಪಡಿತರ ಚೀಟಿಯಲ್ಲಿನ ಈ ತಪ್ಪಿನಿಂದಾಗಿ ಶ್ರೀಕಾಂತ್ ತೀವ್ರ ಕೋಪಗೊಂಡರು. ಈ ವೇಳೆ ಬಿಡಿಒ ಅವರ ಮುಂದೆ ಬೊಗಳಿ ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ಇದೆಲ್ಲ ಕ್ಯಾಮರಾದಲ್ಲಿ ಸೆರೆಯಾಗುತ್ತಿತ್ತು. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯ ನಂತರ, ಪಡಿತರ ಚೀಟಿಯಲ್ಲಿ ನನ್ನ ಉಪನಾಮವನ್ನು ಮೂರು ಬಾರಿ ತಪ್ಪಾಗಿ ಬರೆಯಲಾಗಿದೆ ಎಂದು ಶ್ರೀಕಾಂತ್ ದತ್ತಾ ಹೇಳಿದ್ದಾರೆ. ಮೊದಲ ಎರಡು ಬಾರಿ ಶ್ರೀಕಾಂತ್ ಮಂಡಲ್ ಮತ್ತು ಶ್ರೀಕಾಂತಿ ಎಂದು ಬರೆದಿದ್ದರೆ ಈ ಬಾರಿ ಶ್ರೀಕಾಂತ್ ದತ್ತಾ ಎಂಬ ನನ್ನ ಹೆಸರನ್ನು ಶ್ರೀಕಾಂತ್ ಕುತ್ತಾ ಎಂದು ಬರೆಯಲಾಗಿದೆ. ನಾನು ಮತ್ತೆ ಅರ್ಜಿ ಹಾಕಿದೆ, ಅಲ್ಲಿ ನಾನು ಜಂಟಿ BDO ಅವರನ್ನು ನೋಡಿದೆ, ಆಗ ನನ್ನ ಸಿಟ್ಟನ್ನು ಹೊರಹಾಕಿದೆ ಎಂದಿದ್ದಾರೆ. ಆದರೆ ಅವರು ನನ್ನ ಪ್ರಶ್ನೆಗೆ ಉತ್ತರಿಸದೆ ಅಲ್ಲಿಂದ ಹೊರಟು ಹೋದರು. ನಮ್ಮಂತಹ ಜನಸಾಮಾನ್ಯರು ಎಷ್ಟು ಬಾರಿ ಕೆಲಸ ಬಿಟ್ಟು ಈ ರೀತಿಯ ತಪ್ಪುಗಳನ್ನು ತಿದ್ದಲು ಅರ್ಜಿ ಸಲ್ಲಿಸಲು ಹೋಗುತ್ತಾರೆ ಹೇಳಿ! ಎಂದು ಹೇಳಿದರು. ಈ ಸಂಪೂರ್ಣ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…