Latest

ಮಳೆ ನೀರು ಕೊಯ್ಲು ಗುಣಮಟ್ಟದ ಕೊರತೆ..!

ಕುಂದಗೋಳ: ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೆ ಬದುಕುಬಹುದು ಆದರೆ ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ. ಆದರೆ ನೀರಿಲ್ಲದೆ ಮನುಷ್ಯ ಒಂದು ದಿನ ಸಹ ಇರಲಾರ. ಹೀಗಾಗಿ ನೀರು ಅತಿಅವಶ್ಯಕ.

ಅದರಂತೆ ಗ್ರಾಮೀಣ ಭಾಗದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಜಾರಿಗೆ ತಂದ ಯೋಜನೆ ಮಳೆ ನೀರು ಕೊಯ್ಲು ಒಂದು. ಎಲ್ಲೆಡೆ ನೀರಿನ ಕೊರತೆ ಕಾಣಿಸಿಕೊಳ್ಳಬಾರದು ಅಂತ ಸರಕಾರಗಳು ಸಹ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತದೆ.

ಏನು ಇದು ಮಳೆ ನೀರು ಕೊಯ್ಲು? ಮಳೆಗಾಲದಲ್ಲಿ ಮನೆಯ ಮೇಲ್ಚಾವಣಿ ಮೇಲೆ ಬಿಳ್ಳುವ ನೀರನ್ನು ಪೈಪ್ ಲೈನ್ ಮುಖಾಂತರ ಹಿಡಿದಿಟ್ಟುಕೊಳ್ಳುವುದು. ಜೊತೆಗೆ ಆ ನೀರನ್ನು ನೀರಿನ ಸಂಪಿನ ಒಳಗೆ ಹೋಗಲು ಪೈಪ್ ಲೈನ್ ಅಳವಡಿಸಿ ಸಂಗ್ರಹ ಮಾಡಿ ಬಳಿಕೆಗೆ ಉಪಯೋಗಿಸಿಲು ಇದು ಸಹಕಾರಿಯಾಗಿದೆ. ಹೀಗೆ ಮಾಡುವುದರಿಂದ ದಿನ ಬಳಿಕೆಗೆ ನೀರು ಉಪಯೋಗಿಕಾರಿಯಾಗುತ್ತದೆ

ಹಾಗಾಗಿ ಸರಕಾರದ ಯೋಜನೆಗಳು ಪಾರದರ್ಶಕತೆ ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಯೋಜನೆ ಸದ್ಬಳಕೆ ಆಗಲಿ ಅಂತ ಈ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆಯಲ್ಲಿ ಯೋಜನೆಯಡಿ ರೂಪಿಸಲಾಗಿದೆ.

ಕುಂದಗೋಳ ತಾಲೂಕಿನ ಕಳಸ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾಲಯ ಕೇಂದ್ರದ ಹಿಂಬಾಗದಲ್ಲಿ ನಿರ್ಮಿಸಿಲಾಗಿದ ಮಳೆ ನೀರು ಕೊಯ್ಲು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆ ಕೈ ತೊಳೆದುಕೊಂಡಿದ್ದಾರಾ ಅಧಿಕಾರಿಗಳು? ಚಿಕ್ಕ ಸಂಪು ನಿರ್ಮಾಣ ಮಾಡಿ ಪೈಪ್ ಲೈನ್ ಸಹ ಕನೆಕ್ಷನ್ ಮಾಡದೇ, ಸರಕಾರಿ ಜಾಹೀರಾತು ಹಾಕಿ ನಿರ್ಮಾಣ ಮಾಡಿದವೆ ಅಂತ ಹಣೆಪಟ್ಟಿ ಹಾಕುವುದು ಅಲ್ಲ. ಇದನ್ನು ಅನುಷ್ಠಾನಕ್ಕೆ ತರಬೇಕು.

ಒಂದು ಚಿಕ್ಕ ಕಟ್ಟಿ ತರಹ ನಿರ್ಮಿಸಿ ಸರಿಯಾಗಿ ಪೈಪ್ ಲೈನ್ ಅಳವಡಿಸದೆ, ಅಂದಾಜು ಮೊತ್ತ 1,50,000 ರೂಪಾಯಿ ಖರ್ಚು ಭರಸಲಾಗಿದೆ. ಹಾಗಾದರೆ ಹಣ ಕೂಳ್ಳೆ ಹೊಡಿದಾರ ಅನ್ನುವುದು ಮೇಲ್ನೋಟಕ್ಕೆ ಕಂಡು ಬರ್ತಾ ಇದೆ.

ಒಟ್ಟಾರೆ ಕಾಮಗಾರಿಗಳು ಸಾರ್ವಜನಿಕ ಉಪಯೋಗಿಕಾರಿಯಾಗಿಲಿ ಅನ್ನುವುದು ನಮ್ಮ ಪತ್ರಿಕೆ ಕಳಕಳಿ

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

19 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

19 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

19 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

19 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

19 hours ago