ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿತನದ ಶೈಲಿಯಲ್ಲಿ ನಡೆದ ದಾಂಧಲೆ ಮತ್ತು ಅಪಹರಣದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮೇ 29ರಂದು ನಡೆದ ಈ ಪ್ರಕರಣದಲ್ಲಿ ಕಾವ್ಯಾ ಎಂಬ ಮಹಿಳೆ ತನ್ನ ಸಹಚರರ ಜೊತೆ ಸೇರಿ, ಯುವಕನಿಗೆ ಹಲ್ಲೆ ನಡೆಸಿದ ನಂತರ ಅಪಹರಣ ಮಾಡಿದ್ದಾರೆ.
ಸಲೂನ್ಗೆ ನುಗ್ಗಿದ ಕಾವ್ಯಾ ತನ್ನ ಇಬ್ಬರು ಸ್ನೇಹಿತರಾದ ಮಹ್ಮದ್ ಮತ್ತು ಸ್ಮಿತಾ ಜೊತೆ ಸೇರಿ, ‘ಸಂಜು’ ಎಂಬ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಕಾವ್ಯಾ ಸಿಗರೇಟು ಸೇದುತ್ತಾ, ಸಂಜು ಹಾಗೂ ಅಲ್ಲಿ ಇದ್ದ ಯುವತಿಗೆ ದೌರ್ಜನ್ಯ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿವೆ.
ತೀವ್ರವಾಗಿ ಕೋಪಗೊಂಡ ಕಾವ್ಯಾ, ಸಂಜು ಅವರ ವಿರುದ್ಧ ಅಮಾನುಷವಾಗಿ ವರ್ತಿಸಿದ್ದು, ಕಾಲಿನಿಂದ ತಳ್ಳಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೂಲಗಳ ಪ್ರಕಾರ, ಸಂಜು ಹಿಂದೆ ಕಾವ್ಯಾಳ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದರೂ, ಬಳಿಕ ಮತ್ತೊಂದು ಸ್ಪಾದಲ್ಲಿ ಕೆಲಸಕ್ಕೆ ಸೇರಿದ್ದನ್ನು ಖಂಡಿಸಿ ಈ ದಾಂಧಲೆ ನಡೆಸಲಾಗಿದೆ.
ಘಟನೆಯ ನಂತರ, ಕಾವ್ಯಾ ಮತ್ತು ತಂಡ ಸಂಜುವನ್ನು ಕಾರಿನಲ್ಲಿ ಕೊಂಡೊಯ್ದು ಅಪಹರಿಸಿ, ಬಳಿಕ ಪೊಲೀಸರು ಸಂಪರ್ಕಿಸಿದಾಗ ಅವರನ್ನು ಠಾಣೆಯ ಬಳಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಅಪಹರಣ ಮತ್ತು ಹಲ್ಲೆ ಆರೋಪದ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾವ್ಯಾ, ಮಹ್ಮದ್ ಮತ್ತು ಸ್ಮಿತಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಈಗ ಈ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ. ತದ್ಗತಿವಿಚಾರಣೆಯಲ್ಲಿ ಇನ್ನು ಹೆಚ್ಚಿನ ಮಾಹಿತಿಗಳು ಹೊರಬೀಳುವ ನಿರೀಕ್ಷೆಯಿದ
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…