ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿತನದ ಶೈಲಿಯಲ್ಲಿ ನಡೆದ ದಾಂಧಲೆ ಮತ್ತು ಅಪಹರಣದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮೇ 29ರಂದು ನಡೆದ ಈ ಪ್ರಕರಣದಲ್ಲಿ ಕಾವ್ಯಾ ಎಂಬ ಮಹಿಳೆ ತನ್ನ ಸಹಚರರ ಜೊತೆ ಸೇರಿ, ಯುವಕನಿಗೆ ಹಲ್ಲೆ ನಡೆಸಿದ ನಂತರ ಅಪಹರಣ ಮಾಡಿದ್ದಾರೆ.
ಸಲೂನ್ಗೆ ನುಗ್ಗಿದ ಕಾವ್ಯಾ ತನ್ನ ಇಬ್ಬರು ಸ್ನೇಹಿತರಾದ ಮಹ್ಮದ್ ಮತ್ತು ಸ್ಮಿತಾ ಜೊತೆ ಸೇರಿ, ‘ಸಂಜು’ ಎಂಬ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಕಾವ್ಯಾ ಸಿಗರೇಟು ಸೇದುತ್ತಾ, ಸಂಜು ಹಾಗೂ ಅಲ್ಲಿ ಇದ್ದ ಯುವತಿಗೆ ದೌರ್ಜನ್ಯ ಮಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿವೆ.
ತೀವ್ರವಾಗಿ ಕೋಪಗೊಂಡ ಕಾವ್ಯಾ, ಸಂಜು ಅವರ ವಿರುದ್ಧ ಅಮಾನುಷವಾಗಿ ವರ್ತಿಸಿದ್ದು, ಕಾಲಿನಿಂದ ತಳ್ಳಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೂಲಗಳ ಪ್ರಕಾರ, ಸಂಜು ಹಿಂದೆ ಕಾವ್ಯಾಳ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದರೂ, ಬಳಿಕ ಮತ್ತೊಂದು ಸ್ಪಾದಲ್ಲಿ ಕೆಲಸಕ್ಕೆ ಸೇರಿದ್ದನ್ನು ಖಂಡಿಸಿ ಈ ದಾಂಧಲೆ ನಡೆಸಲಾಗಿದೆ.
ಘಟನೆಯ ನಂತರ, ಕಾವ್ಯಾ ಮತ್ತು ತಂಡ ಸಂಜುವನ್ನು ಕಾರಿನಲ್ಲಿ ಕೊಂಡೊಯ್ದು ಅಪಹರಿಸಿ, ಬಳಿಕ ಪೊಲೀಸರು ಸಂಪರ್ಕಿಸಿದಾಗ ಅವರನ್ನು ಠಾಣೆಯ ಬಳಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಅಪಹರಣ ಮತ್ತು ಹಲ್ಲೆ ಆರೋಪದ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾವ್ಯಾ, ಮಹ್ಮದ್ ಮತ್ತು ಸ್ಮಿತಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಈಗ ಈ ಮೂವರ ಬಂಧನಕ್ಕೆ ಬಲೆ ಬೀಸಿದ್ದಾರೆ. ತದ್ಗತಿವಿಚಾರಣೆಯಲ್ಲಿ ಇನ್ನು ಹೆಚ್ಚಿನ ಮಾಹಿತಿಗಳು ಹೊರಬೀಳುವ ನಿರೀಕ್ಷೆಯಿದ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…