Latest

ಲೇಡಿ ಸಬ್ ಇನ್ಸ್ಪೆಕ್ಟರ್ ಪರಾರಿ ! ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರದ ಆರೋಪ

ಉಡುಪಿ ಜಿಲ್ಲೆಯಲ್ಲಿ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಅವರ ಸಹೋದ್ಯೋಗಿ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುಮಾ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ನಡೆಸಿದ ತನಿಖೆಯಲ್ಲಿ, ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ದೇವಾಲಯದ ಅರ್ಚಕರಿಗೆ ಮಾಹಿತಿ ನೀಡದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ನಡೆಸಿದ್ದರೆಂದು ತಿಳಿದುಬಂದಿದೆ.

ಆರೋಪದಲ್ಲಿ ಪೊಲೀಸ್ ಅಧಿಕಾರಿ ಹೆಸರು

ಈ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಸುಮಾ ಹೆಸರು ಪ್ರಸ್ತಾಪವಾಗಿದ್ದು, ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರ ಪತ್ನಿಯಾದ ಸುಮಾ, ಈ ವಾಮಾಚಾರದಲ್ಲಿ ನಂಟಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ.

ಸುಮಾ ತಲೆಮರೆಸಿಕೆ, ಪೊಲೀಸರು ನೋಟಿಸ್ ಜಾರಿ

ವಾಮಾಚಾರ ಪ್ರಕರಣದಲ್ಲಿ ತಮ್ಮ ಹೆಸರು ಮುಂದುವರಿದಂತೆ ಕೇಳಿಬರುತ್ತಿದ್ದಂತೆ, ಪೊಲೀಸ್ ಅಧಿಕಾರಿ ಸುಮಾ ತಲೆಮರೆಸಿಕೊಂಡಿದ್ದಾರೆ. ಈ ಕುರಿತು ಮಂಗಳೂರು ಪೊಲೀಸರು ನೋಟಿಸ್ ಕಳುಹಿಸಿರುವುದಾದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ತದನಂತರ, ಪ್ರಸಾದ್ ಅತ್ತಾವರ್ ಅವರ ಮೊಬೈಲ್ ಫೋನ್‌ನಲ್ಲಿ ಸಿಕ್ಕಿರುವ ವಾಮಾಚಾರದ ಫೋಟೋಗಳಲ್ಲಿ ಮತ್ತು ಚೀಟಿಗಳಲ್ಲೂ ಸುಮಾ ಹೆಸರು ಉಲ್ಲೇಖಿಸಲಾಗಿದೆ. ವಾಮಾಚಾರದ ವೇಳೆ ಹೆಸರುಗಳಿರುವ ಪಟ್ಟಿ ಪೋಲೀಸರ ತನಿಖೆಗೆ ಸಿಕ್ಕಿದ್ದು, ಅದರಲ್ಲಿ ಸ್ನೇಹಮಯಿ ಕೃಷ್ಣ, ಗಂಗರಾಜು, ಶ್ರೀನಿಧಿ ಮತ್ತು ಸುಮಾ ಅವರ ಹೆಸರುಗಳೂ ಇದ್ದವೆಂದು ಮೂಲಗಳು ತಿಳಿಸಿವೆ.

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದ್ದು, ತಲೆಮರೆಸಿಕೊಂಡಿರುವ ಪೊಲೀಸ್ ಅಧಿಕಾರಿಯನ್ನು ಶೀಘ್ರದಲ್ಲೇ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago