Latest

ಲೇಡಿ ಸಬ್ ಇನ್ಸ್ಪೆಕ್ಟರ್ ಪರಾರಿ ! ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರದ ಆರೋಪ

ಉಡುಪಿ ಜಿಲ್ಲೆಯಲ್ಲಿ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಅವರ ಸಹೋದ್ಯೋಗಿ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುಮಾ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ನಡೆಸಿದ ತನಿಖೆಯಲ್ಲಿ, ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ದೇವಾಲಯದ ಅರ್ಚಕರಿಗೆ ಮಾಹಿತಿ ನೀಡದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ನಡೆಸಿದ್ದರೆಂದು ತಿಳಿದುಬಂದಿದೆ.

ಆರೋಪದಲ್ಲಿ ಪೊಲೀಸ್ ಅಧಿಕಾರಿ ಹೆಸರು

ಈ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಸುಮಾ ಹೆಸರು ಪ್ರಸ್ತಾಪವಾಗಿದ್ದು, ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಅವರ ಪತ್ನಿಯಾದ ಸುಮಾ, ಈ ವಾಮಾಚಾರದಲ್ಲಿ ನಂಟಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಖುದ್ದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ.

ಸುಮಾ ತಲೆಮರೆಸಿಕೆ, ಪೊಲೀಸರು ನೋಟಿಸ್ ಜಾರಿ

ವಾಮಾಚಾರ ಪ್ರಕರಣದಲ್ಲಿ ತಮ್ಮ ಹೆಸರು ಮುಂದುವರಿದಂತೆ ಕೇಳಿಬರುತ್ತಿದ್ದಂತೆ, ಪೊಲೀಸ್ ಅಧಿಕಾರಿ ಸುಮಾ ತಲೆಮರೆಸಿಕೊಂಡಿದ್ದಾರೆ. ಈ ಕುರಿತು ಮಂಗಳೂರು ಪೊಲೀಸರು ನೋಟಿಸ್ ಕಳುಹಿಸಿರುವುದಾದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ತದನಂತರ, ಪ್ರಸಾದ್ ಅತ್ತಾವರ್ ಅವರ ಮೊಬೈಲ್ ಫೋನ್‌ನಲ್ಲಿ ಸಿಕ್ಕಿರುವ ವಾಮಾಚಾರದ ಫೋಟೋಗಳಲ್ಲಿ ಮತ್ತು ಚೀಟಿಗಳಲ್ಲೂ ಸುಮಾ ಹೆಸರು ಉಲ್ಲೇಖಿಸಲಾಗಿದೆ. ವಾಮಾಚಾರದ ವೇಳೆ ಹೆಸರುಗಳಿರುವ ಪಟ್ಟಿ ಪೋಲೀಸರ ತನಿಖೆಗೆ ಸಿಕ್ಕಿದ್ದು, ಅದರಲ್ಲಿ ಸ್ನೇಹಮಯಿ ಕೃಷ್ಣ, ಗಂಗರಾಜು, ಶ್ರೀನಿಧಿ ಮತ್ತು ಸುಮಾ ಅವರ ಹೆಸರುಗಳೂ ಇದ್ದವೆಂದು ಮೂಲಗಳು ತಿಳಿಸಿವೆ.

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದ್ದು, ತಲೆಮರೆಸಿಕೊಂಡಿರುವ ಪೊಲೀಸ್ ಅಧಿಕಾರಿಯನ್ನು ಶೀಘ್ರದಲ್ಲೇ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

4 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

4 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

5 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

15 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

15 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

17 hours ago