Crime

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ: 23 ಜನರು ದೋಷಿ ಎಂದು ನ್ಯಾಯಾಲಯ ತೀರ್ಪು

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಮಂದಿಯನ್ನು ದೋಷಿ ಎಂದು ತೀರ್ಪು ನೀಡಿದೆ. ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇನ್ನಷ್ಟೇ ಘೋಷಿಸಬೇಕಾಗಿದೆ. ದೋಷಿಗಳಲ್ಲಿ ರವಿ ಹತ್ತಾಳ, ಮಲ್ಲಪ್ಪ ಹತ್ತಾಳ, ಬಸವರಾಜ್ ಕೊರವನ್ನವರ್, ಮಹಾಂತೇಶ ಹೊಳಲಾಪುರ, ರಾಜು ಹೊಳಲಾಪುರ, ಬೀರಪ್ಪ ಬಳ್ಳಾರಿ ಸೇರಿದಂತೆ 23 ಜನರ ಹೆಸರುಗಳಿವೆ.

ಘಟನೆ ಹಿನ್ನೆಲೆ

2017ರಲ್ಲಿ ಅಕ್ರಮ ಮರಳು ಸಾಗಾಟದ ವಾಹನವನ್ನು ಪೊಲೀಸರು ತಡೆದು, ಅದರ ಚಾಲಕ ಶಿವಪ್ಪ ಡೋಣಿಯನ್ನು ಥಳಿಸಿದ ಆರೋಪ ಕೇಳಿಬಂದಿತ್ತು. ಗಾಯಗೊಂಡಿದ್ದ ಶಿವಪ್ಪ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ನಂತರ, ಆತನ ಕುಟುಂಬಸ್ಥರು ಮತ್ತು ಸ್ಥಳೀಯರು ಭುಗಿಲೆದ್ದರು. ಪ್ರತಿಭಟನೆಯ ಕಾವು ಏರಿದಂತೆ, ಆಕ್ರೋಶಿತ ಜನರು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದರು. ಈ ಗಲಭೆಯಲ್ಲಿ ಠಾಣೆಯ ಪೀಠೋಪಕರಣಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ Lakshmeshwar ಪೊಲೀಸ್ ಠಾಣೆಯಲ್ಲಿ ಒಟ್ಟು 112 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ 8 ಮಂದಿ ಮೃತರಾಗಿದ್ದು, ಒಬ್ಬರು ಬಾಲಪರಾಧಿ. ಉಳಿದ 103 ಜನರ ವಿರುದ್ಧ ತನಿಖೆ ನಡೆಯಿತು, ಮತ್ತು 23 ಮಂದಿಯನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.

ಪ್ರಕರಣದ ತೀವ್ರತೆ

ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡರ ಅವರ ಪ್ರಕಾರ, ಗಲಭೆಕೋರರು ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದ ಬಳಿಕ, ಅಲ್ಲಿದ್ದ ಮೂವರು ಪೊಲೀಸರ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಸುರಿದು ಅವರನ್ನು ಸುಡುವ ಯತ್ನ ಮಾಡಿದ್ದರು. ಅದೃಷ್ಟವಶಾತ್, ಪೊಲೀಸರು ತಪ್ಪಿಸಿಕೊಂಡು ಪಾರಾಗಿದ್ದರು. ಅಲ್ಲದೇ, ಅಲ್ಲಿ ಭದ್ರತೆಗೆ ಇಟ್ಟಿದ್ದ ಬಂದೂಕನ್ನು ಕಸಿದುಕೊಳ್ಳಲು ಕೂಡ ನಿರ್ಧರಿಸಿದ್ದ ಎಂದು ವಿವರಿಸಿದರು.

ಈ ತೀರ್ಪಿನೊಂದಿಗೆ ದೀರ್ಘಕಾಲದ ವಾದ-ಪ್ರತಿವಾದ ಅಂತ್ಯಗೊಂಡಿದ್ದು, ದೋಷಿಗಳಿಗೆ ಕಠಿಣ ಶಿಕ್ಷೆ ವಿಧಿಸಬಹುದೆಂಬ ನಿರೀಕ್ಷೆ ಇದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago