Crime

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ: 23 ಜನರು ದೋಷಿ ಎಂದು ನ್ಯಾಯಾಲಯ ತೀರ್ಪು

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಮಂದಿಯನ್ನು ದೋಷಿ ಎಂದು ತೀರ್ಪು ನೀಡಿದೆ. ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇನ್ನಷ್ಟೇ ಘೋಷಿಸಬೇಕಾಗಿದೆ. ದೋಷಿಗಳಲ್ಲಿ ರವಿ ಹತ್ತಾಳ, ಮಲ್ಲಪ್ಪ ಹತ್ತಾಳ, ಬಸವರಾಜ್ ಕೊರವನ್ನವರ್, ಮಹಾಂತೇಶ ಹೊಳಲಾಪುರ, ರಾಜು ಹೊಳಲಾಪುರ, ಬೀರಪ್ಪ ಬಳ್ಳಾರಿ ಸೇರಿದಂತೆ 23 ಜನರ ಹೆಸರುಗಳಿವೆ.

ಘಟನೆ ಹಿನ್ನೆಲೆ

2017ರಲ್ಲಿ ಅಕ್ರಮ ಮರಳು ಸಾಗಾಟದ ವಾಹನವನ್ನು ಪೊಲೀಸರು ತಡೆದು, ಅದರ ಚಾಲಕ ಶಿವಪ್ಪ ಡೋಣಿಯನ್ನು ಥಳಿಸಿದ ಆರೋಪ ಕೇಳಿಬಂದಿತ್ತು. ಗಾಯಗೊಂಡಿದ್ದ ಶಿವಪ್ಪ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ನಂತರ, ಆತನ ಕುಟುಂಬಸ್ಥರು ಮತ್ತು ಸ್ಥಳೀಯರು ಭುಗಿಲೆದ್ದರು. ಪ್ರತಿಭಟನೆಯ ಕಾವು ಏರಿದಂತೆ, ಆಕ್ರೋಶಿತ ಜನರು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದರು. ಈ ಗಲಭೆಯಲ್ಲಿ ಠಾಣೆಯ ಪೀಠೋಪಕರಣಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ Lakshmeshwar ಪೊಲೀಸ್ ಠಾಣೆಯಲ್ಲಿ ಒಟ್ಟು 112 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ 8 ಮಂದಿ ಮೃತರಾಗಿದ್ದು, ಒಬ್ಬರು ಬಾಲಪರಾಧಿ. ಉಳಿದ 103 ಜನರ ವಿರುದ್ಧ ತನಿಖೆ ನಡೆಯಿತು, ಮತ್ತು 23 ಮಂದಿಯನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.

ಪ್ರಕರಣದ ತೀವ್ರತೆ

ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡರ ಅವರ ಪ್ರಕಾರ, ಗಲಭೆಕೋರರು ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದ ಬಳಿಕ, ಅಲ್ಲಿದ್ದ ಮೂವರು ಪೊಲೀಸರ ಮೇಲೆ ಪೆಟ್ರೋಲ್ ಮತ್ತು ಡೀಸೆಲ್ ಸುರಿದು ಅವರನ್ನು ಸುಡುವ ಯತ್ನ ಮಾಡಿದ್ದರು. ಅದೃಷ್ಟವಶಾತ್, ಪೊಲೀಸರು ತಪ್ಪಿಸಿಕೊಂಡು ಪಾರಾಗಿದ್ದರು. ಅಲ್ಲದೇ, ಅಲ್ಲಿ ಭದ್ರತೆಗೆ ಇಟ್ಟಿದ್ದ ಬಂದೂಕನ್ನು ಕಸಿದುಕೊಳ್ಳಲು ಕೂಡ ನಿರ್ಧರಿಸಿದ್ದ ಎಂದು ವಿವರಿಸಿದರು.

ಈ ತೀರ್ಪಿನೊಂದಿಗೆ ದೀರ್ಘಕಾಲದ ವಾದ-ಪ್ರತಿವಾದ ಅಂತ್ಯಗೊಂಡಿದ್ದು, ದೋಷಿಗಳಿಗೆ ಕಠಿಣ ಶಿಕ್ಷೆ ವಿಧಿಸಬಹುದೆಂಬ ನಿರೀಕ್ಷೆ ಇದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago