ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ ಸಂಭವಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳು ಕಾಲ ಪರಾರಿಯಾಗಿದ್ದ ಲಾರಿ ಚಾಲಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ದಿನದಿಂದಲೇ ಕಣ್ಮರೆಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರದಿಂದ ಪತ್ತೆ ಹಚ್ಚಲಾಗಿದೆ.
ಜನವರಿ 14ರಂದೇ ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರಿಗೆ ಕಿತ್ತೂರಿನ ಅಂಬಡಗಟ್ಟಿ ಬಳಿ ಲಾರಿ ನಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಅಪಘಾತದಲ್ಲಿ ಸಚಿವೆಗೆ ಬೆನ್ನಿನ ಭಾಗದಲ್ಲಿ ಗಂಭೀರ ಗಾಯವಾಗಿತ್ತು. ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ನೀಡಿದ್ದ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದ ಪೊಲೀಸರು, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುಮಾರು 69 ಲಾರಿಗಳನ್ನು ಗಂಭೀರವಾಗಿ ಪರೀಕ್ಷಿಸಿದರು. ಸುಮಾರು 10 ಲಾರಿಗಳ ಬಣ್ಣದ ಮಾದರಿಗಳನ್ನು ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಎಫ್ಎಸ್ಎಲ್ ವರದಿಯಲ್ಲಿ ಅಪಘಾತಕ್ಕೀಡಾದ ಲಾರಿಯ ಪತ್ತೆ ನಡೆದಿತು.
ಈ ಮಾಹಿತಿಗಳನ್ನೆಲ್ಲ ಆಧರಿಸಿ, ಪುಣೆ ಮೂಲದ ಮಧುಕರ ಸೋಮವಂಶಿ ಎಂಬ ವ್ಯಕ್ತಿಯ ಫೋನ್ ಕಾಲ್ ಡಿಟೇಲ್ಸ್ನಿಂದ ಗುರುತು ಹಿಡಿದು, ಇಂದಾಪುರ ಗ್ರಾಮದಿಂದ ಬಂಧನ ನಡೆಸಲಾಯಿತು. ವಿಚಾರಣೆ ವೇಳೆ ಆತ ಅಪಘಾತ ನಡೆಸಿದ್ದ ವಿಚಾರವನ್ನು ಒಪ್ಪಿಕೊಂಡಿದ್ದಾನೆ. ಆದರೆ ಪ್ರಸ್ತುತವಾಗಿ ಆರೋಪಿಯನ್ನು ಠಾಣಾ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಅಪಘಾತ ನಡೆದ ನಂತರ 3 ತಿಂಗಳ ಕಾಲ ಕಿತ್ತೂರು ಪೊಲೀಸರು ಶ್ರಮಪಟ್ಟು ತನಿಖೆ ನಡೆಸಿದ್ದು, ಅಂತಿಮವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿದ್ದೇವೆ. ಚಾರ್ಜ್ಶೀಟ್ ಸಿದ್ಧಪಡಿಸಿ ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು,” ಎಂದು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…