Latest

ಮಂಡ್ಯದಲ್ಲಿ ಜಾಗದ ವಿವಾದ ಹಲ್ಲೆಗೆ ದಾರಿ: ಮೂವರು ಮಹಿಳೆಯರಿಗೆ ಗಂಭೀರ ಗಾಯ, ಆರೋಪಿ ಪರಾರಿಯಲ್ಲಿ

ಮಂಡ್ಯ, ಜುಲೈ 25: ಜಾಗದ ವಿಚಾರದಲ್ಲಿ ಉಂಟಾದ ವಿವಾದವು ಹಿಂಸಾತ್ಮಕ ಘಟನೆಗೆ ಕಾರಣವಾಗಿದ್ದು, ಯುವಕನೊಬ್ಬ ತನ್ನ ಪಕ್ಕದ ಮನೆಯ ಮಹಿಳೆಯರಿಗೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಗ್ರಾಮದ ನಿವಾಸಿ ಚಂದನ್ ಎಂಬ ಯುವಕ, ಮನೆಯ ಪಕ್ಕದ ಜಾಗದ ವಿವಾದದ ಹಿನ್ನೆಲೆಯಲ್ಲಿ ಲಕ್ಷ್ಮಮ್ಮ, ರತ್ನಮ್ಮ ಮತ್ತು ಸಾಕಮ್ಮ ಎಂಬ ಮಹಿಳೆಯರಿಗೆ ಬಡಿದಾಳಿಯಾಗಿ ಕಬ್ಬಿಣದ ಕಂಬ ಅಥವಾ ಕಟ್ಟಿಗೆಯಂತಹ ಹಾರ್ಡ್ ವಸ್ತುಗಳಿಂದ ಹಲ್ಲೆ ನಡೆಸಿದಾನೆ. ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಚಂದನ್‌ನ ಹಿಂಸಾತ್ಮಕ ವರ್ತನೆ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.

ಸ್ಥಳೀಯರು ನೀಡಿರುವ ಮಾಹಿತಿಯ ಪ್ರಕಾರ, ಚಂದನ್ ಹಾಗೂ ರತ್ನಮ್ಮ ಅವರ ಮನೆಗಳು ಅಕ್ಕಪಕ್ಕದಲ್ಲಿವೆ. ಕಳೆದ ಕೆಲವು ವರ್ಷಗಳಿಂದ ಮನೆಗಳ ಪಕ್ಕದ ಖಾಲಿ ಜಾಗದ ಹಕ್ಕು ಪ್ರಶ್ನೆಯು ಎರಡು ಕುಟುಂಬಗಳ ನಡುವೆ ಮನಸ್ತಾಪಕ್ಕೆ ಕಾರಣವಾಗಿತ್ತು. ಜುಲೈ 23ರಂದು ರತ್ನಮ್ಮಗೆ ಸೇರಿದ ಜಾಗದಲ್ಲಿ ಚಂದನ್ ಕುಟುಂಬದವರು ತಾತ್ಕಾಲಿಕ ಶೆಡ್ ಹಾಕಲು ಮುಂದಾಗಿದ್ದು, ಇದನ್ನು ಪ್ರಶ್ನಿಸಿದ ರತ್ನಮ್ಮ ಮೇಲೆ ಚಂದನ್ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ನಂತರ ಮಧ್ಯಪ್ರವೇಶಕ್ಕೆ ಬಂದ ಲಕ್ಷ್ಮಮ್ಮ ಮತ್ತು ಸಾಕಮ್ಮ ಅವರಿಗೂ ಹಲ್ಲೆ ನಡೆಸಲಾಗಿದೆ.

ಹಲ್ಲೆಗೊಳಗಾದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಸ್ಥರು ಈ ಬಗ್ಗೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿ ಚಂದನ್ ಈತನ್ಲು ಈವರೆಗೆ ಬಂಧಿಸಲು ಸಾಧ್ಯವಾಗಿಲ್ಲ. ಸದ್ಯ ಪೊಲೀಸರು ಅವನಿಗಾಗಿ ಶೋಧ ನಡೆಸುತ್ತಿದ್ದಾರೆ.

ಈ ಘಟನೆ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಪೊಲೀಸ್ ಇಲಾಖೆ ಹೆಚ್ಚಿನ ಭದ್ರತೆ ಕೈಗೊಂಡಿದೆ.

nazeer ahamad

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago