ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ ಕಚೇರಿಗಳಲ್ಲಿ ಬೇರೆಬೇರೆ ದರ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ಉಂಟಾಗುತ್ತಿದ್ದ ಗೊಂದಲ ನಿವಾರಣೆ ಹಾಗೂ ಏಕರೂಪದ ಶುಲ್ಕ ವ್ಯವಸ್ಥೆ ಜಾರಿಗೆ ತರುವ ಉದ್ದೇಶದಿಂದ ಹೊಸ ದರಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ಟಿಪ್ಪಣಿ ಅಥವಾ ಅಟ್ಲಾಸ್ ನಕಲುಗಳಿಗೆ ಪ್ರತಿ ಸರ್ವೆ ಅಥವಾ ಹಿಸ್ಸಾ ನಂಬರಿಗೆ ₹35 ಶುಲ್ಕ ನಿಗದಿಪಡಿಸಲಾಗಿದೆ. ಆಕಾರಬಂದು ನಕಲುಗಳಿಗೆ ₹20 ಹಾಗೂ ಹದ್ದುಬಸ್ತು ಸ್ಕೆಚ್ ಅಥವಾ ಪಿ.ಟಿ ಶೀಟ್ಗಳಿಗೆ ₹35 ವಸೂಲಿ ಮಾಡಲಾಗುತ್ತದೆ.
ಇದಲ್ಲದೆ, ನಕಾಶೆಯಲ್ಲಿ ಗುರುತಿಸಲಾದ ಪ್ರತಿ ಸರ್ವೆ ನಂಬರಿನ ವಿವರದ ನಕಲಿಗೆ ₹10 ಶುಲ್ಕ ವಿಧಿಸಲಾಗುತ್ತದೆ. ನೋಟಿಸ್ ಕಾಪಿ, ಅರ್ಜಿ ನಕಲು, ಹೇಳಿಕೆ ಅಥವಾ ಮಹಜರು ಪ್ರತಿಗಳಂತಹ ದಾಖಲೆಗಳಿಗೆ ಪ್ರತಿ ಪುಟಕ್ಕೆ ₹10 ದರ ನಿಗದಿಯಾಗಿದೆ.
ಆದೇಶದ ನಕಲುಗಳಿಗೆ ಮೊದಲ 100 ಪದಗಳಿಗೆ ಅಥವಾ ಅದರ ಭಾಗಕ್ಕೆ ₹10 ಹಾಗೂ ನಂತರದ ಪ್ರತಿ 100 ಪದಗಳಿಗೆ ಹೆಚ್ಚುವರಿ ₹10 ಶುಲ್ಕ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ನಗರಮಾಪನ ವಿಭಾಗದ ದಾಖಲೆಗಳಾದ ಪಿ.ಆರ್. ಕಾರ್ಡ್, ವಿಚಾರಣಾ ರಿಜಿಸ್ಟರ್ ಎಂಟ್ರಿ ಮತ್ತು ಫೀಲ್ಡ್ ಬುಕ್ ನಕಲುಗಳಿಗೆ ತಲಾ ₹30 ನಿಗದಿಪಡಿಸಲಾಗಿದೆ.
ಇನ್ನು ಗ್ರಾಮ ನಕಾಶೆ ಅಥವಾ ನಗರಮಾಪನ ಎಲ್.ಎ ನಕಾಶೆಯ ವಿಸ್ತೀರ್ಣವು 500 ಚದರ ಇಂಚು ಮೀರಿದರೆ, ನಿಗದಿತ ದರದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತದೆ ಎಂಬ ವಿಶೇಷ ಸೂಚನೆಯನ್ನೂ ಇಲಾಖೆ ನೀಡಿದೆ.
ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಭೂಮಾಪನ ಇಲಾಖೆಯ ಆಯುಕ್ತ ವೆಂಕಟ್ ರಾಜಾ ಅವರು ಮೇ 11, 2026ರಂದು ಆದೇಶ ಹೊರಡಿಸಿದ್ದಾರೆ. ಇಲಾಖೆಯ ಎಲ್ಲಾ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.
ಇದರಿಂದ ಇನ್ನು ಮುಂದೆ ಸಾರ್ವಜನಿಕರು ಭೂದಾಖಲೆಗಳ ನಕಲು ಪಡೆಯುವಾಗ ರಾಜ್ಯಾದ್ಯಂತ ಒಂದೇ ರೀತಿಯ ಪರಿಷ್ಕೃತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…