Categories: Latest

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ ಕಚೇರಿಗಳಲ್ಲಿ ಬೇರೆಬೇರೆ ದರ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ಉಂಟಾಗುತ್ತಿದ್ದ ಗೊಂದಲ ನಿವಾರಣೆ ಹಾಗೂ ಏಕರೂಪದ ಶುಲ್ಕ ವ್ಯವಸ್ಥೆ ಜಾರಿಗೆ ತರುವ ಉದ್ದೇಶದಿಂದ ಹೊಸ ದರಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.

ಹೊಸ ಆದೇಶದ ಪ್ರಕಾರ, ಟಿಪ್ಪಣಿ ಅಥವಾ ಅಟ್ಲಾಸ್ ನಕಲುಗಳಿಗೆ ಪ್ರತಿ ಸರ್ವೆ ಅಥವಾ ಹಿಸ್ಸಾ ನಂಬರಿಗೆ ₹35 ಶುಲ್ಕ ನಿಗದಿಪಡಿಸಲಾಗಿದೆ. ಆಕಾರಬಂದು ನಕಲುಗಳಿಗೆ ₹20 ಹಾಗೂ ಹದ್ದುಬಸ್ತು ಸ್ಕೆಚ್ ಅಥವಾ ಪಿ.ಟಿ ಶೀಟ್‌ಗಳಿಗೆ ₹35 ವಸೂಲಿ ಮಾಡಲಾಗುತ್ತದೆ.

ಇದಲ್ಲದೆ, ನಕಾಶೆಯಲ್ಲಿ ಗುರುತಿಸಲಾದ ಪ್ರತಿ ಸರ್ವೆ ನಂಬರಿನ ವಿವರದ ನಕಲಿಗೆ ₹10 ಶುಲ್ಕ ವಿಧಿಸಲಾಗುತ್ತದೆ. ನೋಟಿಸ್ ಕಾಪಿ, ಅರ್ಜಿ ನಕಲು, ಹೇಳಿಕೆ ಅಥವಾ ಮಹಜರು ಪ್ರತಿಗಳಂತಹ ದಾಖಲೆಗಳಿಗೆ ಪ್ರತಿ ಪುಟಕ್ಕೆ ₹10 ದರ ನಿಗದಿಯಾಗಿದೆ.

ಆದೇಶದ ನಕಲುಗಳಿಗೆ ಮೊದಲ 100 ಪದಗಳಿಗೆ ಅಥವಾ ಅದರ ಭಾಗಕ್ಕೆ ₹10 ಹಾಗೂ ನಂತರದ ಪ್ರತಿ 100 ಪದಗಳಿಗೆ ಹೆಚ್ಚುವರಿ ₹10 ಶುಲ್ಕ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ನಗರಮಾಪನ ವಿಭಾಗದ ದಾಖಲೆಗಳಾದ ಪಿ.ಆರ್. ಕಾರ್ಡ್, ವಿಚಾರಣಾ ರಿಜಿಸ್ಟರ್ ಎಂಟ್ರಿ ಮತ್ತು ಫೀಲ್ಡ್ ಬುಕ್ ನಕಲುಗಳಿಗೆ ತಲಾ ₹30 ನಿಗದಿಪಡಿಸಲಾಗಿದೆ.

ಇನ್ನು ಗ್ರಾಮ ನಕಾಶೆ ಅಥವಾ ನಗರಮಾಪನ ಎಲ್.ಎ ನಕಾಶೆಯ ವಿಸ್ತೀರ್ಣವು 500 ಚದರ ಇಂಚು ಮೀರಿದರೆ, ನಿಗದಿತ ದರದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತದೆ ಎಂಬ ವಿಶೇಷ ಸೂಚನೆಯನ್ನೂ ಇಲಾಖೆ ನೀಡಿದೆ.

ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಭೂಮಾಪನ ಇಲಾಖೆಯ ಆಯುಕ್ತ ವೆಂಕಟ್ ರಾಜಾ ಅವರು ಮೇ 11, 2026ರಂದು ಆದೇಶ ಹೊರಡಿಸಿದ್ದಾರೆ. ಇಲಾಖೆಯ ಎಲ್ಲಾ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.

ಇದರಿಂದ ಇನ್ನು ಮುಂದೆ ಸಾರ್ವಜನಿಕರು ಭೂದಾಖಲೆಗಳ ನಕಲು ಪಡೆಯುವಾಗ ರಾಜ್ಯಾದ್ಯಂತ ಒಂದೇ ರೀತಿಯ ಪರಿಷ್ಕೃತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಭ್ರಷ್ಟರ ಬೇಟೆ

Recent Posts

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

8 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

9 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

9 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

9 hours ago

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಚಾಕು ದಾಳಿ ಸಂಚಲನ: ನಿವೃತ್ತ ಬಿಎಂಟಿಸಿ ಸಿಬ್ಬಂದಿಗೆ ಗಾಯ, ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…

9 hours ago

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…

9 hours ago