ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ ಕಚೇರಿಗಳಲ್ಲಿ ಬೇರೆಬೇರೆ ದರ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ಉಂಟಾಗುತ್ತಿದ್ದ ಗೊಂದಲ ನಿವಾರಣೆ ಹಾಗೂ ಏಕರೂಪದ ಶುಲ್ಕ ವ್ಯವಸ್ಥೆ ಜಾರಿಗೆ ತರುವ ಉದ್ದೇಶದಿಂದ ಹೊಸ ದರಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
ಹೊಸ ಆದೇಶದ ಪ್ರಕಾರ, ಟಿಪ್ಪಣಿ ಅಥವಾ ಅಟ್ಲಾಸ್ ನಕಲುಗಳಿಗೆ ಪ್ರತಿ ಸರ್ವೆ ಅಥವಾ ಹಿಸ್ಸಾ ನಂಬರಿಗೆ ₹35 ಶುಲ್ಕ ನಿಗದಿಪಡಿಸಲಾಗಿದೆ. ಆಕಾರಬಂದು ನಕಲುಗಳಿಗೆ ₹20 ಹಾಗೂ ಹದ್ದುಬಸ್ತು ಸ್ಕೆಚ್ ಅಥವಾ ಪಿ.ಟಿ ಶೀಟ್ಗಳಿಗೆ ₹35 ವಸೂಲಿ ಮಾಡಲಾಗುತ್ತದೆ.
ಇದಲ್ಲದೆ, ನಕಾಶೆಯಲ್ಲಿ ಗುರುತಿಸಲಾದ ಪ್ರತಿ ಸರ್ವೆ ನಂಬರಿನ ವಿವರದ ನಕಲಿಗೆ ₹10 ಶುಲ್ಕ ವಿಧಿಸಲಾಗುತ್ತದೆ. ನೋಟಿಸ್ ಕಾಪಿ, ಅರ್ಜಿ ನಕಲು, ಹೇಳಿಕೆ ಅಥವಾ ಮಹಜರು ಪ್ರತಿಗಳಂತಹ ದಾಖಲೆಗಳಿಗೆ ಪ್ರತಿ ಪುಟಕ್ಕೆ ₹10 ದರ ನಿಗದಿಯಾಗಿದೆ.
ಆದೇಶದ ನಕಲುಗಳಿಗೆ ಮೊದಲ 100 ಪದಗಳಿಗೆ ಅಥವಾ ಅದರ ಭಾಗಕ್ಕೆ ₹10 ಹಾಗೂ ನಂತರದ ಪ್ರತಿ 100 ಪದಗಳಿಗೆ ಹೆಚ್ಚುವರಿ ₹10 ಶುಲ್ಕ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ನಗರಮಾಪನ ವಿಭಾಗದ ದಾಖಲೆಗಳಾದ ಪಿ.ಆರ್. ಕಾರ್ಡ್, ವಿಚಾರಣಾ ರಿಜಿಸ್ಟರ್ ಎಂಟ್ರಿ ಮತ್ತು ಫೀಲ್ಡ್ ಬುಕ್ ನಕಲುಗಳಿಗೆ ತಲಾ ₹30 ನಿಗದಿಪಡಿಸಲಾಗಿದೆ.
ಇನ್ನು ಗ್ರಾಮ ನಕಾಶೆ ಅಥವಾ ನಗರಮಾಪನ ಎಲ್.ಎ ನಕಾಶೆಯ ವಿಸ್ತೀರ್ಣವು 500 ಚದರ ಇಂಚು ಮೀರಿದರೆ, ನಿಗದಿತ ದರದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತದೆ ಎಂಬ ವಿಶೇಷ ಸೂಚನೆಯನ್ನೂ ಇಲಾಖೆ ನೀಡಿದೆ.
ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಭೂಮಾಪನ ಇಲಾಖೆಯ ಆಯುಕ್ತ ವೆಂಕಟ್ ರಾಜಾ ಅವರು ಮೇ 11, 2026ರಂದು ಆದೇಶ ಹೊರಡಿಸಿದ್ದಾರೆ. ಇಲಾಖೆಯ ಎಲ್ಲಾ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.
ಇದರಿಂದ ಇನ್ನು ಮುಂದೆ ಸಾರ್ವಜನಿಕರು ಭೂದಾಖಲೆಗಳ ನಕಲು ಪಡೆಯುವಾಗ ರಾಜ್ಯಾದ್ಯಂತ ಒಂದೇ ರೀತಿಯ ಪರಿಷ್ಕೃತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…