ಪಿರಿಯಾಪಟ್ಟಣ ತಾಲೂಕಿನ ಬೆಮ್ಮತ್ತಿ ಗಿರಿಜನ ಹಾಡಿಯ ಮಹಿಳೆಯರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಶಾಸಕ ಕೆ. ಮಹಾದೇವ್ ಬೆಂಬಲಿಗರು ಎನ್ನಲಾದ ಐಲಾಪುರ ಗ್ರಾಮದ ಲೋಕೇಶ್ ಮತ್ತು ಆತನ ಸಂಬಂಧಿ ಕುಳ್ಳ ಎಂಬುವರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.
ಜಯಮ್ಮ, ಲಕ್ಷ್ಮಿ, ಶೋಭ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಏಕಾಏಕಿ ಬಂದವರೇ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಜತೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ತೀವ್ರ ಹಲ್ಲೆಗೊಳಗಾದವರನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ದಾಖಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…