Corruption

ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ಐಷಾರಾಮಿ ಬದುಕು! ಕೆಆರ್‌ಐಡಿಎಲ್ ಸೂಪರಿಂಟೆಂಡೆಂಟ್ ಇಂಜಿನಿಯರ್ ಮನೆ-ಫಾರಂಹೌಸ್‌ನಲ್ಲಿ ಅಪಾರ ಆಸ್ತಿ ಪತ್ತೆ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ ಮತ್ತೊಂದು ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಕೆಆರ್‌ಐಡಿಎಲ್ ಸಂಸ್ಥೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಪ್ರವೀಣ್ ಶ್ರೀ ಹರಿ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ, ನಗದು, ಚಿನ್ನ ಹಾಗೂ ಬೇನಾಮಿ ಆಸ್ತಿಗಳ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.

ದಾಳಿಯ ವೇಳೆ ಅಧಿಕಾರಿಗಳು ವಶಪಡಿಸಿಕೊಂಡ ದಾಖಲೆಗಳು ಮತ್ತು ಆಸ್ತಿಯ ಪ್ರಮಾಣ ತನಿಖಾಧಿಕಾರಿಗಳನ್ನೇ ಅಚ್ಚರಿಗೆ ದೂಡಿದೆ. ಆದಾಯಕ್ಕೆ ಮೀರಿದ ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಪತ್ತೆಯಾದ ಆಸ್ತಿಗಳ ಮೌಲ್ಯದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದರ ನಡುವೆ ಪ್ರವೀಣ್ ಶ್ರೀ ಹರಿ ಅವರು ಇತ್ತೀಚೆಗೆ ನಿರ್ಮಿಸಿದ್ದ ಐಷಾರಾಮಿ ಫಾರಂಹೌಸ್ ಕೂಡ ತನಿಖೆಯ ಕೇಂದ್ರಬಿಂದುವಾಗಿದೆ. ವಾರಾಂತ್ಯಗಳಲ್ಲಿ ಇಲ್ಲಿ ಭರ್ಜರಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು ಎಂಬ ಮಾಹಿತಿಯೂ ಕೇಳಿಬಂದಿದ್ದು, ತನಿಖೆಯ ಭಾಗವಾಗಿ ಸಂಬಂಧಿತ ಆಸ್ತಿಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಂದೋಬಸ್ತ್ ಕರ್ತವ್ಯದ ನಡುವೆ ಪೊಲೀಸ್ ವಾಹನದಲ್ಲೇ ಕಾನ್ಸ್ಟೇಬಲ್ ಆತ್ಮಹತ್ಯೆ; ಕಲಬುರಗಿಯಲ್ಲಿ ಬೆಚ್ಚಿಬೀಳಿಸಿದ ಘಟನೆ

ಕಲಬುರಗಿ: ನಗರದ ಜಗತ್ ವೃತ್ತದ ಬಳಿ ಬುಧವಾರ ನಡೆದ ದುರ್ಘಟನೆಯೊಂದು ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ನಗರ ಪ್ರವಾಸದ ಹಿನ್ನೆಲೆಯಲ್ಲಿ…

5 hours ago

ಫೇಸ್‌ಬುಕ್ ಸ್ನೇಹದ ಬಲೆಗೆ ಬಿದ್ದ ತಹಶೀಲ್ದಾರ್! ಸರ್ಕಾರಿ ನಿವಾಸದಲ್ಲೇ ಲೈಂಗಿಕ ದೌರ್ಜನ್ಯ, ದರೋಡೆ, ಕೊಲೆ ಯತ್ನ ಆರೋಪ

ರಾಮನಗರ/ಚನ್ನಪಟ್ಟಣ: ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪರಿಚಯವು ಸರ್ಕಾರಿ ಅಧಿಕಾರಿಯೊಬ್ಬರ ಜೀವನದಲ್ಲಿ ಆಘಾತಕಾರಿ ಘಟನೆಯಾಗಿ ಪರಿಣಮಿಸಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್…

5 hours ago

ಪ್ರೇಮಿಯೊಂದಿಗೆ ಸೇರಿ ಪತಿಯ ಹತ್ಯೆ! ಅಂತ್ಯಸಂಸ್ಕಾರದವರೆಗೂ ನಾಟಕ, 49 ಕರೆಗಳು ಬಯಲು ಮಾಡಿದ ಭೀಕರ ಸಂಚು

ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ಪತ್ನಿಯೊಬ್ಬಳು ತನ್ನ ಪ್ರೇಮಿಯೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಪುಣೆಯಲ್ಲಿ…

5 hours ago

ಮುಸ್ಲಿಂ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ: 8 ವರ್ಷಗಳ ಬಳಿಕ ಪತ್ನಿ-ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ…

5 hours ago

ನೀನೊಬ್ಬ ಗಂಡಸೇನಾ? ನಿನ್ನಿಂದ ನನ್ನ ಆಸೆ ತೀರಿಸಲು ಸಾಧ್ಯವಿಲ್ಲ ಎಂದ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ, ಮೂವರು ಮಕ್ಕಳು ಅನಾಥ

ವೇಲೂರು: ತಮಿಳುನಾಡಿನ ವೇಲೂರು ಜಿಲ್ಲೆಯಲ್ಲಿ ದಾಂಪತ್ಯ ಕಲಹದ ಅಂತ್ಯ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ನಡೆದ…

5 hours ago

ಯೂರಿಯಾ ಗೊಬ್ಬರ ಮಾರಾಟದಲ್ಲಿ ಅಕ್ರಮ ಆರೋಪ: ಪಿಕೆಪಿಎಸ್ ವಿರುದ್ಧ ರೈತರ ಆಕ್ರೋಶ, ಕೃಷಿ ಇಲಾಖೆ ನೋಟಿಸ್

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪಿಕೆಪಿಎಸ್) ನಡೆಸುತ್ತಿರುವ ರಸಗೊಬ್ಬರ ಅಂಗಡಿಯಲ್ಲಿ ಯೂರಿಯಾ…

5 hours ago