ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ತೂಗುದೀಪ ಅವರ ಜಾಮೀನು ರದ್ದಾಗುವ ಸಾಧ್ಯತೆಗಳು ಚರ್ಚೆಗೆ ಬಂದಿರುವ ನಡುವೆ, ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಇದೀಗ ಭಾರೀ ಗದ್ದಲ ಸೃಷ್ಟಿಸಿದೆ.
ರಮ್ಯಾ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಟ್ವೀಟ್ ಮಾಡುತ್ತಿದ್ದಂತೆಯೇ, ದರ್ಶನ್ ಅಭಿಮಾನಿಗಳಿಂದ ಅವಳಿಗೆ ನಿಂದನೆ ಹಾಗೂ ಅಪಮಾನಕಾರಿ ಸಂದೇಶಗಳ ಮಳೆಯೇ ಸುರಿಯಿತು. ‘ಅಮ್ಮ’, ‘ಅಕ್ಕ’ ಎನ್ನುವ ಪದಬಳಕೆಗಳ ಮೂಲಕ ಪರ್ಸನಲ್ ಟಿಕೆಟ್ ತೆಗೆದುಕೊಂಡ ಅಭಿಮಾನಿಗಳ ವಿಡಂಬನೆಗೆ ತುತ್ತಾದ ರಮ್ಯಾ, ತಾನು ಪಡೆದ ಹಲವಾರು ಮೆಸೇಜ್ಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡು, “ನಾನು ಕೇಳಿದಂತಷ್ಟೆ, ರೇಣುಕಾಸ್ವಾಮಿ ಮತ್ತು ನನ್ನ ನಡುವೆನಾದರೂ ವ್ಯತ್ಯಾಸವಿದೆಯೆ?” ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ, ನಟಿ ರಕ್ಷಿತಾ ಪ್ರೇಮ್ ಕೂಡ ಈ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ, ನಾನು ಏನನ್ನು ವೈರಲ್ ಆಗುವುದನ್ನು ನೋಡಲು ಇಚ್ಛಿಸುತ್ತೇನೆ ಗೊತ್ತಾ? ಕನಿಷ್ಟ ಮಾನವೀಯತೆʼ ಎಂಬ ಸಂದೇಶವಿರುವ ಸ್ಟೋರಿಯನ್ನು ಪೋಸ್ಟ್ ಮಾಡಿದ್ದು, ಅದು ಈಗ ಮತ್ತೊಂದು ಚರ್ಚೆಗೆ ತುತ್ತಾಗಿದೆ.
ಈ ಸ್ಟೋರಿ ರಮ್ಯಾಗೆ ನೀಡಿದ ಟಾಂಗ್ ಎಂದು ದರ್ಶನ್ ಅಭಿಮಾನಿಗಳು ಹೇಳಿಕೆ ನೀಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಅಭಿಪ್ರಾಯಗಳು ಹರಿದುಬರುತ್ತಿವೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…