Latest

ಮಹಿಳೆ ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬಡವನಹಳ್ಳಿ ಪೊಲೀಸ್ ಠಾಣೆ ಮೋ.ನಂ 60/2019 ಎಸ್.ಸಿ¸ ಸಂ 5037/2019 ರಲ್ಲಿ ದಾಖಲಾದ ಠಾಣಾ ಸರಹದ್ದಿನಲ್ಲಿ ಆರೋಪಿ-01 ಶಿವಕುಮಾರ್ 42 ವರ್ಷ ವಯಸ್ಸು ಮುಗ್ಗೊಂಡನಹಳ್ಳಿ ಗ್ರಾಮ ಕೊರಟಗೆರೆ ತಾಲೂಕು ಮತ್ತು ಕೊಲೆಯಾದ ತುಂಬಾಡಿ ಗ್ರಾಮದ ಗಿರಿಜಮ್ಮ ಕೊಂ ಲೇ ಮೂಡಲಗಿರಿಯಪ್ಪ ರವರು ಪರಸ್ಪರ ಸಂಬಂಧಿಕರಾಗಿದ್ದು ಗಿರಿಜಮ್ಮ ರವರ ಬಳಿಯಿಂದ ಬಂಗಾರದ ಒಡವೆಗಳ ಆಸೆಗಾಗಿ ಆರೋಪಿ0-1 ರವರು ಗಿರಿಜಮ್ಮ ರವರನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿ-02 ಮಂಜುನಾಥ್ 44 ವರ್ಷ ಮಧುಗಿರಿ ತಾಲೂಕು ಬಿಜಾವರ ಗ್ರಾಮ, ರವರೊಂದಿಗೆ ಸೇರಿ ಇಬ್ಬರು ಸಮಾನ ಉದ್ದೇಶದಿಂದ ಪೂರ್ವ ಸಿದ್ಧತೆ ಮಾಡಿಕೊಂಡು ದಿನಾಂಕ 06/06/2019 ರಂದು ಮೃತೆ ಗಿರಿಜಮ್ಮ ರವರನ್ನು ಮಧ್ಯಾಹ್ನ 12:30 ಗಂಟೆಯಲ್ಲಿ ತುಂಬಾಡಿಯಿಂದ ಕೆಎ-06-ಡಿ-3279 ಟಾಟಾ ಇಂಡಿಕಾ ವಿಸ್ತಾ ಕಾರಿನಲ್ಲಿ ಧರಣಿ ಹೊಸಕೋಟೆಗೆ ಮಟನ್ ಊಟಕ್ಕೆ ಹೋಗಿ ಬರೋಣ ಅಂತ ಹೇಳಿ ಕರೆದುಕೊಂಡು ಬಂದು ಅದೇ ದಿವಸ ಸಂಜೆ 6:30 ಗಂಟೆಗೆ ಬಡವನಹಳ್ಳಿ ಠಾಣಾ ಸರಹದ್ದು ಮಾಯಗೊಂಡನಹಳ್ಳಿ ಕ್ರಾಸ್ ಹತ್ತಿರದ ರಸ್ತೆ ಬದಿಯ ಕೆಂಪಚೆನ್ನೇಹಳ್ಳಿ ಸರ್ವೇ ನಂಬರ್ 8/1 ಪಾಳು ಜಮೀನಿಗೆ ಕರೆದುಕೊಂಡು ಬಂದು ಹೊಂಗೆಗಿಡದ ಮರೆಯಲ್ಲಿ ಕಾರುನಿಲ್ಲಿಸಿ ಕಾರಿನಲ್ಲಿಯೇ ಆರೋಪಿ-01 ರವರು ಹಗ್ಗವನ್ನು ಗಿರಿಜಮ್ಮಳ ಕುತ್ತಿಗೆಗೆ ಬಿಗಿದಿದ್ದು ಕೊಲೆ ಮಾಡುವ ಉದ್ದೇಶದಿಂದ ಆರೋಪಿ01 @ 02 ರವರು ಹಗ್ಗವನ್ನು ಬಿಗಿಯಾಗಿ ಎಳೆದು ಆರೋಪಿ-01 ರವರು ಗಿರಿಜಮ್ಮಳ್ಳ ಎದೆಗೆ ಕಾಲಿನಿಂದ ಒಂದು ಕೈಯಿಂದ ಗುದ್ದಿ ಇಬ್ಬರು ಸೇರಿ ಕೊಲೆ ಮಾಡಿರುತ್ತಾರೆ

ನಂತರ ಆಕೆಯ ಬಳಿಯಿಂದ ಸುಮಾರು 1,83,500/-ರೂ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ಆರೋಪಿ-01 ರವರು ತೆಗೆದುಕೊಂಡು ಅದೇ ಕಾರಿನಲ್ಲಿ ಗಿರಿಜಮ್ಮಳ ಮೃತ ದೇಹದೊಂದಿಗೆ ರಂಟವಾಳಕ್ಕೆ ಬಂದು ಸಾಕ್ಷಿ-02 ಹೇಮಂತ್ ರವರ ಅಂಗಡಿಯಲ್ಲಿ 2ನೇ ಆರೋಪಿ ಡೀಸಲ್ ತೆಗೆದುಕೊಂಡು ಸಂಜೆ 7:00ಗೆ ಸಮಯದಲ್ಲಿ ಆಂಧ್ರ ಗಡಿಭಾಗದ ರಸ್ತೆ ಬದಿಯಲ್ಲಿದ್ದ ಸಾಕ್ಷಿ 01 ಪುಲಮಘಟ್ಟದ ನಾರಾಯಣಪ್ಪ ರವರ ಜಮೀನಿನಲ್ಲಿ ಕೊಲೆ ಕೃತ್ಯದ ಸಾಕ್ಷಿ ನಾಶ ಮಾಡುವ ಸಲುವಾಗಿ ಗಿರಿಜಮ್ಮಳ ಮೃತ ದೇಹಕ್ಕೆ ಡೀಸೆಲ್ ಹಾಕಿ ಮೃತಳ ಮೊಬೈಲ್ ಮತ್ತು ಸಿಮ್ ಅನ್ನು ಸಿಗದಂತೆ ಎಲ್ಲೋ ಎಸೆದು ಸಾಕ್ಷಿ ನಾಶ ಪಡಿಸಿ ಮೃತಾಳ ಮೈ ಮೇಲಿನ ಒಡವೆಗಳನ್ನು ಕೊರಟಗೆರೆಯ ಮುತ್ತೊಟ್ಟ ಫೈನಾನ್ಸನಲ್ಲಿ ನೆಕ್ಲೆಸ್ ಮತ್ತು ಉಂಗುರ ಅಡವಿಟ್ಟು ಸಾಲ ಪಡೆದು ಇನ್ನುಳಿದ ಕೊಡುಗೆಗಳನ್ನು ತೋವಿನಕೆರೆಯ ಭಾಗ್ಯಲಕ್ಷ್ಮಿ ಜ್ಯೂವೆರ‍್ಸೆಗೆ ಹೊಸದಾಗಿ ಸರ ತಾಳಿ ಓಲೆ ಮಾಡಿಕೊಡುವಂತೆ ಕೊಟ್ಟು ಬಂದಿದ್ದು ತನಿಕೆಯಿಂದ ದೃಢಪಟ್ಟ ಮೇರೆಗೆ ಆರೋಪಿತನ ವಿರುದ್ಧ ಭಾ.ದಂ.¸ಸಂ ಕಲಂ 302. 201,404 ಅಡಿಯಲ್ಲಿ ತನಿಖಾಧಿಕಾರಿಯಾದ ಪೊಲೀಸ್ ಇನ್ಸ್ಪೆಕ್ಟರ್ ಪ್ರಭಾಕರ್ ಕೆ ರವರು ದೋಷಾರೂಪಣ ಪಟ್ಟಿ ಸಲ್ಲಿಸಿದ್ದು ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿಯ ಮಾನ್ಯ ನಾಲ್ಕನೇ ಅಧಿಕ ಜಿಲ್ಲೆ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಯಾದವ ಕಾರೆಕೆರೆ ರವರು ದಿನಾಂಕ 24-03-2025 ರಂದು ಇಬ್ಬರು ಆರೋಪಿತರರಿಗೆ ಭಾರತೀಯ ದಂಡ ಸಂಹಿತೆಯ ಕಾಲಂ 302, 201, 404 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲ ರು 60,000 ಗಂಡ ವಿಧಿಸಿ ತೀರ್ಪು ನೀಡಿರುತ್ತಾರೆ ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಬಿ.ಎಂ ನಿರಂಜನಮೂರ್ತಿ ಸರ್ಕಾರಿ ಅಭಿಯೋಜಕರು ವಾದ ಮಾಡಿಸಿದ್ದರು

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

5 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

5 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

5 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

5 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

5 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago