Latest

ಮಹಿಳೆ ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬಡವನಹಳ್ಳಿ ಪೊಲೀಸ್ ಠಾಣೆ ಮೋ.ನಂ 60/2019 ಎಸ್.ಸಿ¸ ಸಂ 5037/2019 ರಲ್ಲಿ ದಾಖಲಾದ ಠಾಣಾ ಸರಹದ್ದಿನಲ್ಲಿ ಆರೋಪಿ-01 ಶಿವಕುಮಾರ್ 42 ವರ್ಷ ವಯಸ್ಸು ಮುಗ್ಗೊಂಡನಹಳ್ಳಿ ಗ್ರಾಮ ಕೊರಟಗೆರೆ ತಾಲೂಕು ಮತ್ತು ಕೊಲೆಯಾದ ತುಂಬಾಡಿ ಗ್ರಾಮದ ಗಿರಿಜಮ್ಮ ಕೊಂ ಲೇ ಮೂಡಲಗಿರಿಯಪ್ಪ ರವರು ಪರಸ್ಪರ ಸಂಬಂಧಿಕರಾಗಿದ್ದು ಗಿರಿಜಮ್ಮ ರವರ ಬಳಿಯಿಂದ ಬಂಗಾರದ ಒಡವೆಗಳ ಆಸೆಗಾಗಿ ಆರೋಪಿ0-1 ರವರು ಗಿರಿಜಮ್ಮ ರವರನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿ-02 ಮಂಜುನಾಥ್ 44 ವರ್ಷ ಮಧುಗಿರಿ ತಾಲೂಕು ಬಿಜಾವರ ಗ್ರಾಮ, ರವರೊಂದಿಗೆ ಸೇರಿ ಇಬ್ಬರು ಸಮಾನ ಉದ್ದೇಶದಿಂದ ಪೂರ್ವ ಸಿದ್ಧತೆ ಮಾಡಿಕೊಂಡು ದಿನಾಂಕ 06/06/2019 ರಂದು ಮೃತೆ ಗಿರಿಜಮ್ಮ ರವರನ್ನು ಮಧ್ಯಾಹ್ನ 12:30 ಗಂಟೆಯಲ್ಲಿ ತುಂಬಾಡಿಯಿಂದ ಕೆಎ-06-ಡಿ-3279 ಟಾಟಾ ಇಂಡಿಕಾ ವಿಸ್ತಾ ಕಾರಿನಲ್ಲಿ ಧರಣಿ ಹೊಸಕೋಟೆಗೆ ಮಟನ್ ಊಟಕ್ಕೆ ಹೋಗಿ ಬರೋಣ ಅಂತ ಹೇಳಿ ಕರೆದುಕೊಂಡು ಬಂದು ಅದೇ ದಿವಸ ಸಂಜೆ 6:30 ಗಂಟೆಗೆ ಬಡವನಹಳ್ಳಿ ಠಾಣಾ ಸರಹದ್ದು ಮಾಯಗೊಂಡನಹಳ್ಳಿ ಕ್ರಾಸ್ ಹತ್ತಿರದ ರಸ್ತೆ ಬದಿಯ ಕೆಂಪಚೆನ್ನೇಹಳ್ಳಿ ಸರ್ವೇ ನಂಬರ್ 8/1 ಪಾಳು ಜಮೀನಿಗೆ ಕರೆದುಕೊಂಡು ಬಂದು ಹೊಂಗೆಗಿಡದ ಮರೆಯಲ್ಲಿ ಕಾರುನಿಲ್ಲಿಸಿ ಕಾರಿನಲ್ಲಿಯೇ ಆರೋಪಿ-01 ರವರು ಹಗ್ಗವನ್ನು ಗಿರಿಜಮ್ಮಳ ಕುತ್ತಿಗೆಗೆ ಬಿಗಿದಿದ್ದು ಕೊಲೆ ಮಾಡುವ ಉದ್ದೇಶದಿಂದ ಆರೋಪಿ01 @ 02 ರವರು ಹಗ್ಗವನ್ನು ಬಿಗಿಯಾಗಿ ಎಳೆದು ಆರೋಪಿ-01 ರವರು ಗಿರಿಜಮ್ಮಳ್ಳ ಎದೆಗೆ ಕಾಲಿನಿಂದ ಒಂದು ಕೈಯಿಂದ ಗುದ್ದಿ ಇಬ್ಬರು ಸೇರಿ ಕೊಲೆ ಮಾಡಿರುತ್ತಾರೆ

ನಂತರ ಆಕೆಯ ಬಳಿಯಿಂದ ಸುಮಾರು 1,83,500/-ರೂ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ಆರೋಪಿ-01 ರವರು ತೆಗೆದುಕೊಂಡು ಅದೇ ಕಾರಿನಲ್ಲಿ ಗಿರಿಜಮ್ಮಳ ಮೃತ ದೇಹದೊಂದಿಗೆ ರಂಟವಾಳಕ್ಕೆ ಬಂದು ಸಾಕ್ಷಿ-02 ಹೇಮಂತ್ ರವರ ಅಂಗಡಿಯಲ್ಲಿ 2ನೇ ಆರೋಪಿ ಡೀಸಲ್ ತೆಗೆದುಕೊಂಡು ಸಂಜೆ 7:00ಗೆ ಸಮಯದಲ್ಲಿ ಆಂಧ್ರ ಗಡಿಭಾಗದ ರಸ್ತೆ ಬದಿಯಲ್ಲಿದ್ದ ಸಾಕ್ಷಿ 01 ಪುಲಮಘಟ್ಟದ ನಾರಾಯಣಪ್ಪ ರವರ ಜಮೀನಿನಲ್ಲಿ ಕೊಲೆ ಕೃತ್ಯದ ಸಾಕ್ಷಿ ನಾಶ ಮಾಡುವ ಸಲುವಾಗಿ ಗಿರಿಜಮ್ಮಳ ಮೃತ ದೇಹಕ್ಕೆ ಡೀಸೆಲ್ ಹಾಕಿ ಮೃತಳ ಮೊಬೈಲ್ ಮತ್ತು ಸಿಮ್ ಅನ್ನು ಸಿಗದಂತೆ ಎಲ್ಲೋ ಎಸೆದು ಸಾಕ್ಷಿ ನಾಶ ಪಡಿಸಿ ಮೃತಾಳ ಮೈ ಮೇಲಿನ ಒಡವೆಗಳನ್ನು ಕೊರಟಗೆರೆಯ ಮುತ್ತೊಟ್ಟ ಫೈನಾನ್ಸನಲ್ಲಿ ನೆಕ್ಲೆಸ್ ಮತ್ತು ಉಂಗುರ ಅಡವಿಟ್ಟು ಸಾಲ ಪಡೆದು ಇನ್ನುಳಿದ ಕೊಡುಗೆಗಳನ್ನು ತೋವಿನಕೆರೆಯ ಭಾಗ್ಯಲಕ್ಷ್ಮಿ ಜ್ಯೂವೆರ‍್ಸೆಗೆ ಹೊಸದಾಗಿ ಸರ ತಾಳಿ ಓಲೆ ಮಾಡಿಕೊಡುವಂತೆ ಕೊಟ್ಟು ಬಂದಿದ್ದು ತನಿಕೆಯಿಂದ ದೃಢಪಟ್ಟ ಮೇರೆಗೆ ಆರೋಪಿತನ ವಿರುದ್ಧ ಭಾ.ದಂ.¸ಸಂ ಕಲಂ 302. 201,404 ಅಡಿಯಲ್ಲಿ ತನಿಖಾಧಿಕಾರಿಯಾದ ಪೊಲೀಸ್ ಇನ್ಸ್ಪೆಕ್ಟರ್ ಪ್ರಭಾಕರ್ ಕೆ ರವರು ದೋಷಾರೂಪಣ ಪಟ್ಟಿ ಸಲ್ಲಿಸಿದ್ದು ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿಯ ಮಾನ್ಯ ನಾಲ್ಕನೇ ಅಧಿಕ ಜಿಲ್ಲೆ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಯಾದವ ಕಾರೆಕೆರೆ ರವರು ದಿನಾಂಕ 24-03-2025 ರಂದು ಇಬ್ಬರು ಆರೋಪಿತರರಿಗೆ ಭಾರತೀಯ ದಂಡ ಸಂಹಿತೆಯ ಕಾಲಂ 302, 201, 404 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲ ರು 60,000 ಗಂಡ ವಿಧಿಸಿ ತೀರ್ಪು ನೀಡಿರುತ್ತಾರೆ ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಬಿ.ಎಂ ನಿರಂಜನಮೂರ್ತಿ ಸರ್ಕಾರಿ ಅಭಿಯೋಜಕರು ವಾದ ಮಾಡಿಸಿದ್ದರು

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago