ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಭೂಗತಲೋಕ ಪಾತಕಿಗಳಿಂದ ಜೀವ ಬೆದರಿಕೆ ಕರೆಗಳು ಬಂದಿರುವ ವಿಷಯ ಭಾನುವಾರದಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಯಿತು. ಈ ಕುರಿತು ಮಾತನಾಡಿದ ಖಾದರ್, ಇಂತಹ ಬೆದರಿಕೆ ಕರೆಗಳು ಮೊದಲು ಕೂಡ ಹಲವಾರು ಬಾರಿ ಬಂದಿದ್ದನ್ನು ನೆನೆದರು.
“ನಮ್ಮ ಜನ್ಮ ಮತ್ತು ಮರಣದ ಬಗ್ಗೆ ತೀರ್ಮಾನ ಮಾಡುವ ಶಕ್ತಿ ದೇವರಿಗಿದೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ — ನನಗೆ ಶಾಂತಿಯುತ ಮರಣ ಸಿಕ್ಕಲಿ. ಎಲ್ಲವೂ ದೇವರ ಲೀಲೆಯೇ, ನಮ್ಮ ಕೈಯಲ್ಲಿ ಏನೂ ಇಲ್ಲ,” ಎಂದು ಭಾವೋದ್ರಿಕ್ತವಾಗಿ ಪ್ರತಿಕ್ರಿಯಿಸಿದ ಖಾದರ್, ತಮ್ಮ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನೂ ವ್ಯಕ್ತಪಡಿಸಿದರು.
“ಈಗ ನಿಮ್ಮ ಮುಂದೆ ನಿಂತು ಮಾತಾಡುತ್ತಿದ್ದೇನೆ. ಆದರೆ ಇದೇಕ್ಷಣದಿಂದ ನಾನು ಮತ್ತೆ ಮನೆಗೆ ಜೀವಂತವಾಗಿ ವಾಪಸ್ ಹೋಗುತ್ತೀನೆ ಎಂಬ ಭರವಸೆ ನನಗೆ ಇಲ್ಲ,” ಎಂದರು. ಈ ಮಾತುಗಳು ಅವರ ಭೀತಿಯ ತೀವ್ರತೆಯನ್ನು ತೋರಿಸುತ್ತವೆ.
ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ತಮ್ಮ ಗೃಹ ಜಿಲ್ಲೆಯಲ್ಲಿ ಎನ್ಐಎ ಯನ್ನು ಸ್ಥಾಪಿಸುವ ಕುರಿತು ಮಾತನಾಡಿದ ಅವರು, “ನನ್ನ ರಕ್ಷಣೆಗೆಂದು ಅದರ ಅಗತ್ಯವಿಲ್ಲ. ಆದರೆ ಇದು ಜಿಲ್ಲೆಯ ಜನರ ಹಿತದೃಷ್ಟಿಯಿಂದ ಅಗತ್ಯವಿದ್ದರೆ, ಸರ್ಕಾರ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬಹುದು,” ಎಂದು ಹೇಳಿದರು.
ಸ್ಪೀಕರ್ ಖಾದರ್ ಅವರ ಈ ಬಯಾನದಿಂದ, ಭೂಗತಲೋಕದ ಬೆದರಿಕೆಗಳು ರಾಜಕೀಯ ನಾಯಕರ ಭದ್ರತೆಗೆ ಎಂತಹ ಆತಂಕ ಸೃಷ್ಟಿಸುತ್ತವೆ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಎಳೆದಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…