ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಭೂಗತಲೋಕ ಪಾತಕಿಗಳಿಂದ ಜೀವ ಬೆದರಿಕೆ ಕರೆಗಳು ಬಂದಿರುವ ವಿಷಯ ಭಾನುವಾರದಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಯಿತು. ಈ ಕುರಿತು ಮಾತನಾಡಿದ ಖಾದರ್, ಇಂತಹ ಬೆದರಿಕೆ ಕರೆಗಳು ಮೊದಲು ಕೂಡ ಹಲವಾರು ಬಾರಿ ಬಂದಿದ್ದನ್ನು ನೆನೆದರು.
“ನಮ್ಮ ಜನ್ಮ ಮತ್ತು ಮರಣದ ಬಗ್ಗೆ ತೀರ್ಮಾನ ಮಾಡುವ ಶಕ್ತಿ ದೇವರಿಗಿದೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ — ನನಗೆ ಶಾಂತಿಯುತ ಮರಣ ಸಿಕ್ಕಲಿ. ಎಲ್ಲವೂ ದೇವರ ಲೀಲೆಯೇ, ನಮ್ಮ ಕೈಯಲ್ಲಿ ಏನೂ ಇಲ್ಲ,” ಎಂದು ಭಾವೋದ್ರಿಕ್ತವಾಗಿ ಪ್ರತಿಕ್ರಿಯಿಸಿದ ಖಾದರ್, ತಮ್ಮ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನೂ ವ್ಯಕ್ತಪಡಿಸಿದರು.
“ಈಗ ನಿಮ್ಮ ಮುಂದೆ ನಿಂತು ಮಾತಾಡುತ್ತಿದ್ದೇನೆ. ಆದರೆ ಇದೇಕ್ಷಣದಿಂದ ನಾನು ಮತ್ತೆ ಮನೆಗೆ ಜೀವಂತವಾಗಿ ವಾಪಸ್ ಹೋಗುತ್ತೀನೆ ಎಂಬ ಭರವಸೆ ನನಗೆ ಇಲ್ಲ,” ಎಂದರು. ಈ ಮಾತುಗಳು ಅವರ ಭೀತಿಯ ತೀವ್ರತೆಯನ್ನು ತೋರಿಸುತ್ತವೆ.
ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ತಮ್ಮ ಗೃಹ ಜಿಲ್ಲೆಯಲ್ಲಿ ಎನ್ಐಎ ಯನ್ನು ಸ್ಥಾಪಿಸುವ ಕುರಿತು ಮಾತನಾಡಿದ ಅವರು, “ನನ್ನ ರಕ್ಷಣೆಗೆಂದು ಅದರ ಅಗತ್ಯವಿಲ್ಲ. ಆದರೆ ಇದು ಜಿಲ್ಲೆಯ ಜನರ ಹಿತದೃಷ್ಟಿಯಿಂದ ಅಗತ್ಯವಿದ್ದರೆ, ಸರ್ಕಾರ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬಹುದು,” ಎಂದು ಹೇಳಿದರು.
ಸ್ಪೀಕರ್ ಖಾದರ್ ಅವರ ಈ ಬಯಾನದಿಂದ, ಭೂಗತಲೋಕದ ಬೆದರಿಕೆಗಳು ರಾಜಕೀಯ ನಾಯಕರ ಭದ್ರತೆಗೆ ಎಂತಹ ಆತಂಕ ಸೃಷ್ಟಿಸುತ್ತವೆ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಎಳೆದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…