ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಭೂಗತಲೋಕ ಪಾತಕಿಗಳಿಂದ ಜೀವ ಬೆದರಿಕೆ ಕರೆಗಳು ಬಂದಿರುವ ವಿಷಯ ಭಾನುವಾರದಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಯಿತು. ಈ ಕುರಿತು ಮಾತನಾಡಿದ ಖಾದರ್, ಇಂತಹ ಬೆದರಿಕೆ ಕರೆಗಳು ಮೊದಲು ಕೂಡ ಹಲವಾರು ಬಾರಿ ಬಂದಿದ್ದನ್ನು ನೆನೆದರು.
“ನಮ್ಮ ಜನ್ಮ ಮತ್ತು ಮರಣದ ಬಗ್ಗೆ ತೀರ್ಮಾನ ಮಾಡುವ ಶಕ್ತಿ ದೇವರಿಗಿದೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ — ನನಗೆ ಶಾಂತಿಯುತ ಮರಣ ಸಿಕ್ಕಲಿ. ಎಲ್ಲವೂ ದೇವರ ಲೀಲೆಯೇ, ನಮ್ಮ ಕೈಯಲ್ಲಿ ಏನೂ ಇಲ್ಲ,” ಎಂದು ಭಾವೋದ್ರಿಕ್ತವಾಗಿ ಪ್ರತಿಕ್ರಿಯಿಸಿದ ಖಾದರ್, ತಮ್ಮ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನೂ ವ್ಯಕ್ತಪಡಿಸಿದರು.
“ಈಗ ನಿಮ್ಮ ಮುಂದೆ ನಿಂತು ಮಾತಾಡುತ್ತಿದ್ದೇನೆ. ಆದರೆ ಇದೇಕ್ಷಣದಿಂದ ನಾನು ಮತ್ತೆ ಮನೆಗೆ ಜೀವಂತವಾಗಿ ವಾಪಸ್ ಹೋಗುತ್ತೀನೆ ಎಂಬ ಭರವಸೆ ನನಗೆ ಇಲ್ಲ,” ಎಂದರು. ಈ ಮಾತುಗಳು ಅವರ ಭೀತಿಯ ತೀವ್ರತೆಯನ್ನು ತೋರಿಸುತ್ತವೆ.
ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ತಮ್ಮ ಗೃಹ ಜಿಲ್ಲೆಯಲ್ಲಿ ಎನ್ಐಎ ಯನ್ನು ಸ್ಥಾಪಿಸುವ ಕುರಿತು ಮಾತನಾಡಿದ ಅವರು, “ನನ್ನ ರಕ್ಷಣೆಗೆಂದು ಅದರ ಅಗತ್ಯವಿಲ್ಲ. ಆದರೆ ಇದು ಜಿಲ್ಲೆಯ ಜನರ ಹಿತದೃಷ್ಟಿಯಿಂದ ಅಗತ್ಯವಿದ್ದರೆ, ಸರ್ಕಾರ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬಹುದು,” ಎಂದು ಹೇಳಿದರು.
ಸ್ಪೀಕರ್ ಖಾದರ್ ಅವರ ಈ ಬಯಾನದಿಂದ, ಭೂಗತಲೋಕದ ಬೆದರಿಕೆಗಳು ರಾಜಕೀಯ ನಾಯಕರ ಭದ್ರತೆಗೆ ಎಂತಹ ಆತಂಕ ಸೃಷ್ಟಿಸುತ್ತವೆ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಎಳೆದಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…