ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಮಚ್ಚೇರಿ ಗ್ರಾಮದಲ್ಲಿ ಜೀವ ಉಳಿಸಬೇಕಾದ ಪೊಲೀಸರೇ ಹಿಟ್ ಅಂಡ್ ರನ್ ಅಪಘಾತ ಮಾಡಿ ಪರಾರಿಯಾದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸ್ ಜೀಪ್ ಹಿಂಬದಿಯಿಂದ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತನನ್ನು ಗಂಗಾಧರ್ (49) ಎಂದು ಗುರುತಿಸಲಾಗಿದೆ.
ಪೊಲೀಸ್ ಜೀಪ್ ಡಿಕ್ಕಿ – ಸ್ಥಳದಲ್ಲೇ ಸ್ಕೂಟರ್ ಸವಾರ ಸಾವು
ಕಡೂರು – ಮರವಂಜಿ ರಾಜ್ಯ ಹೆದ್ದಾರಿಯಲ್ಲಿ ಸಿಂಗಟಗೆರೆ ಪೊಲೀಸ್ ಠಾಣೆಗೆ ಸೇರಿದ ಜೀಪ್ ವೇಗವಾಗಿ ಬಂದು ಸ್ಕೂಟರ್ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ಅಪಘಾತದ ತಕ್ಷಣವೇ ಪೊಲೀಸರು ಜೀಪ್ ನಿಲ್ಲಿಸದೆ ಪರಾರಿಯಾದ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯರಿಂದ ತೀವ್ರ ಆಕ್ರೋಶ
ಘಟನಾ ಸ್ಥಳದಲ್ಲಿ ನೂರಾರು ಸ್ಥಳೀಯರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಮೃತದೇಹವನ್ನು ಸ್ಥಳದಿಂದ ತೆಗೆದುಕೊಳ್ಳಲು ಸಹ ಒಪ್ಪುತ್ತಿಲ್ಲ. ಪೊಲೀಸರ ನಿರ್ಲಕ್ಷ್ಯ ಮತ್ತು ಮಾನವೀಯತೆಯನ್ನು ಮರೆತು ಪರಾರಿಯಾದ ನಡೆ ಖಂಡನೆಗೆ ಕಾರಣವಾಗಿದೆ.
ಪೊಲೀಸ್ ಜೀಪ್ ಚಾಲಕ ಅಮಾನತು – ಪ್ರಕರಣ ದಾಖಲು
ಘಟನೆ ಸಂಬಂಧ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ತಕ್ಷಣ ಕಠಿಣ ಕ್ರಮ ಕೈಗೊಂಡಿದ್ದು, ಜೀಪ್ ಚಾಲಕ ಶಿವಕುಮಾರ್ ಅವರನ್ನು ಅಮಾನತು ಮಾಡಿದ್ದಾರೆ. ಅಲ್ಲದೆ, ಪೊಲೀಸ್ ವಾಹನವನ್ನು ವಶಕ್ಕೆ ಪಡೆದು, ಶಿವಕುಮಾರ್ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆ ಪೊಲೀಸರ ನಿಯಂತ್ರಣಹೀನತೆಗೆ ಮತ್ತೊಮ್ಮೆ ಕನ್ನಡಿಯಾಗಿದ್ದು, ಸ್ಥಳೀಯರು ಕಠಿಣ ಕ್ರಮದ ಮುಗಿಯದ ನ್ಯಾಯದ ಹಕ್ಕು ಕೇಳುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…