Latest

ಯೂನಿಯನ್ ಬ್ಯಾಂಕ್ ಸಿಬ್ಬಂದಿಯಿಂದ ಸಾಲದ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ರೈತರೊಬ್ಬರು ಸಾಲಭಾದೆಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮಂಜಾನಾಯ್ಕ್ (45) ಎಂಬವರು ಆತ್ಮಹತ್ಯೆಗೆ ಶರಣಾಗಿರುವ ರೈತರಾಗಿದ್ದಾರೆ.

ಬ್ಯಾಂಕ್ ಸಿಬ್ಬಂದಿಯ ಮೇಲಿನ ಕಿರುಕುಳದ ಆರೋಪ

ಮಂಜಾನಾಯ್ಕ್ ಅವರು ಯೂನಿಯನ್ ಬ್ಯಾಂಕಿನಿಂದ ₹4.70 ಲಕ್ಷದ ಸಾಲ ಪಡೆದಿದ್ದರು. ಹಣ ತೀರಿಸಲು ಕಠಿಣ ಒತ್ತಡ ಎದುರಾದ ಅವರು ಬ್ಯಾಂಕಿನ ವ್ಯವಸ್ಥಾಪಕ ಕಿರಣ್ ಹಾಗೂ ಗುಮಾಸ್ತ ಪಿರೋಜಿ ಅವರಿಂದ ನಿರಂತರ ಕಿರುಕುಳ ಅನುಭವಿಸಿದ್ದರೆಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.

ಬ್ಯಾಂಕಿನವರು ಮಂಜಾನಾಯ್ಕ್ ಅವರಿಗೆ ಲಾಯರ್ ನೋಟೀಸ್ ಕಳುಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅವಮಾನಿಸುತ್ತಿದ್ದರು. ಈ ನಿರಂತರ ಮಾನಸಿಕ ಒತ್ತಡಕ್ಕೆ ತತ್ತರಿಸಿದ ಅವರು ಶಿವಮೊಗ್ಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರ ಮೃತ್ಯು ಸಂಭವಿಸಿದೆ.

ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹುಣಸಘಟ್ಟ ಗ್ರಾಮಸ್ಥರು, ಆತ್ಮಹತ್ಯೆ ಮಾಡಿದ ರೈತನ ಶವವನ್ನು ಯೂನಿಯನ್ ಬ್ಯಾಂಕ್ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಪೊಲೀಸರ ಮಧ್ಯಸ್ಥಿಕೆಯಿಂದ ಪ್ರತಿಭಟನೆ ಶಾಂತಿಯುತವಾಗಿ ಅಂತ್ಯಗೊಂಡಿತು. ಆದರೆ ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳು ಬ್ಯಾಂಕ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿವೆ.

ಪೊಲೀಸರು ತನಿಖೆ ಆರಂಭಿಸಿದ್ರು

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ರೈತರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಪ್ರಾರಂಭಿಸಲಾಗಿದೆ. ಈ ಮಧ್ಯೆ, ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಮತ್ತಷ್ಟು ಗಂಭೀರ ತಿರುವು ಪಡೆಯುವ ಸಾಧ್ಯತೆಯಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

13 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

13 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

13 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

13 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

13 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago