Latest

ಯೂನಿಯನ್ ಬ್ಯಾಂಕ್ ಸಿಬ್ಬಂದಿಯಿಂದ ಸಾಲದ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ರೈತರೊಬ್ಬರು ಸಾಲಭಾದೆಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮಂಜಾನಾಯ್ಕ್ (45) ಎಂಬವರು ಆತ್ಮಹತ್ಯೆಗೆ ಶರಣಾಗಿರುವ ರೈತರಾಗಿದ್ದಾರೆ.

ಬ್ಯಾಂಕ್ ಸಿಬ್ಬಂದಿಯ ಮೇಲಿನ ಕಿರುಕುಳದ ಆರೋಪ

ಮಂಜಾನಾಯ್ಕ್ ಅವರು ಯೂನಿಯನ್ ಬ್ಯಾಂಕಿನಿಂದ ₹4.70 ಲಕ್ಷದ ಸಾಲ ಪಡೆದಿದ್ದರು. ಹಣ ತೀರಿಸಲು ಕಠಿಣ ಒತ್ತಡ ಎದುರಾದ ಅವರು ಬ್ಯಾಂಕಿನ ವ್ಯವಸ್ಥಾಪಕ ಕಿರಣ್ ಹಾಗೂ ಗುಮಾಸ್ತ ಪಿರೋಜಿ ಅವರಿಂದ ನಿರಂತರ ಕಿರುಕುಳ ಅನುಭವಿಸಿದ್ದರೆಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.

ಬ್ಯಾಂಕಿನವರು ಮಂಜಾನಾಯ್ಕ್ ಅವರಿಗೆ ಲಾಯರ್ ನೋಟೀಸ್ ಕಳುಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅವಮಾನಿಸುತ್ತಿದ್ದರು. ಈ ನಿರಂತರ ಮಾನಸಿಕ ಒತ್ತಡಕ್ಕೆ ತತ್ತರಿಸಿದ ಅವರು ಶಿವಮೊಗ್ಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರ ಮೃತ್ಯು ಸಂಭವಿಸಿದೆ.

ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹುಣಸಘಟ್ಟ ಗ್ರಾಮಸ್ಥರು, ಆತ್ಮಹತ್ಯೆ ಮಾಡಿದ ರೈತನ ಶವವನ್ನು ಯೂನಿಯನ್ ಬ್ಯಾಂಕ್ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಪೊಲೀಸರ ಮಧ್ಯಸ್ಥಿಕೆಯಿಂದ ಪ್ರತಿಭಟನೆ ಶಾಂತಿಯುತವಾಗಿ ಅಂತ್ಯಗೊಂಡಿತು. ಆದರೆ ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳು ಬ್ಯಾಂಕ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿವೆ.

ಪೊಲೀಸರು ತನಿಖೆ ಆರಂಭಿಸಿದ್ರು

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ರೈತರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಪ್ರಾರಂಭಿಸಲಾಗಿದೆ. ಈ ಮಧ್ಯೆ, ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಮತ್ತಷ್ಟು ಗಂಭೀರ ತಿರುವು ಪಡೆಯುವ ಸಾಧ್ಯತೆಯಿದೆ.

nazeer ahamad

Recent Posts

ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ

ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…

5 hours ago

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…

5 hours ago

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…

16 hours ago

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

21 hours ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

22 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

1 day ago