Politics

“ನನ್ನ ಸೋಲಿಗೆ ಸ್ಥಳೀಯ ಕಾಂಗ್ರೆಸ್ ನಾಯಕರೇ ಕಾರಣ” : ಅವರನ್ನು ಸೋಲಿಸುವುದು ಎರಡು ಸೆಕೆಂಡ್‌ಗಳ ಕೆಲಸ- ಇಕ್ಬಾಲ್ ಅನ್ಸಾರಿ

ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಅನುಭವಿಸಿದ ಎರಡು ಚುನಾವಣಾ ಸೋಲುಗಳಿಗೆ ಕೊಪ್ಪಳ, ಕನಕಗಿರಿ ಹಾಗೂ ಯಲಬುರ್ಗಾ ಕ್ಷೇತ್ರಗಳ ಸ್ಥಳೀಯ ಕಾಂಗ್ರೆಸ್ ನಾಯಕರೇ ನೇರ ಹೊಣೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ವಿಶ್ವಾಸದಿಂದಲೇ ತಾವು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ ಎಂದು ಹೇಳಿದ ಅನ್ಸಾರಿ, ಪಕ್ಷವು ಎರಡು ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿದ್ದರೂ, ಸ್ಥಳೀಯ ನಾಯಕರು ತಮ್ಮ ಗೆಲುವಿಗೆ ಸಹಕರಿಸುವ ಬದಲು ಸೋಲಿಸಲು ಒಳಗಿನಿಂದಲೇ ಕೆಲಸ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮನ್ನು ಸೋಲಿಸಿದವರನ್ನು ರಾಜಕೀಯವಾಗಿ ಸೋಲಿಸುವುದು ಕೇವಲ ಎರಡು ಸೆಕೆಂಡ್‌ಗಳ ಕೆಲಸ ಎಂದು ಹೇಳಿದ ಅನ್ಸಾರಿ, ಶುಕ್ರವಾರ ಮಸೀದಿಯಲ್ಲಿ ಒಂದು ಮನವಿ ಪತ್ರ ಓದಿಸಿದರೆ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಬಹುದು ಎಂದು ಹೇಳಿದರು. ಆದರೆ ತಾವು ದೇವರ ಭಕ್ತರಾಗಿದ್ದು, ಅಂತಹ ದಾರಿಯನ್ನು ಅನುಸರಿಸುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ತಾವು ಜೆಡಿಎಸ್ ಅಥವಾ ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ ಅವರು, ತಾವು ಈಗಲೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದು, ಸುಳ್ಳು ಸುದ್ದಿಗಳಿಗೆ ಜನರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

10 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

10 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

10 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

1 day ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

1 day ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

1 day ago