ಹಾವೇರಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ವಿರುದ್ಧದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದಾರೆ. ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್ನ ಪಿಡಿಒ ಸೇರಿದಂತೆ ಉಪಾಧ್ಯಕ್ಷ ಹಾಗೂ ಮೂವರು ಸದಸ್ಯರನ್ನು ಲಂಚ ಸ್ವೀಕಾರ ಆರೋಪದಲ್ಲಿ ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಅಂದನೂರು ಲೇಔಟ್ನ ನವೀನ್ ಎಂಬುವವರ 60 ಪ್ಲಾಟ್ಗಳ ಎನ್.ಎ ಇ-ಸ್ವತ್ತು ಉತಾರ ಪೂರೈಸಲು ಆರೋಪಿಗಳು 4.5 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ನವೀನ್ ಅವರು ನೀಡಿದ ದೂರಿನಂತೆ ಲೋಕಾಯುಕ್ತ ಅಧಿಕಾರಿಗಳು ಜಾಲ ಬೀರಿ, ಲಂಚ ಪಡೆಯುವ ಕ್ಷಣದಲ್ಲಿ ಆರೋಪಿಗಳನ್ನು ಬಮ್ಬಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹೀಗಾಗಿ ಗುರುತಿಸಲಾಗಿದೆ: ಪಿಡಿಒ ಕೆ. ಮಂಜುನಾಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಮತ್ತು ಸದಸ್ಯರಾದ ಸೋಮಶೇಖರ್, ಪ್ರಸನ್ನ ಹಾಗೂ ಸೈಯದ್ ರೆಹಮಾನ್.
ಈ ಪ್ರಕರಣದಿಂದ ಮತ್ತೆ ಹಾವೇರಿ ಜಿಲ್ಲೆಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಲಂಚದ ಹಾವಳಿ ಕುರಿತು ಚರ್ಚೆ ಹುಟ್ಟುಹಾಕಿದ್ದು, ಮುಂದಿನ ತನಿಖೆ ಹೇಗೆ ಸಾಗಲಿದೆ ಎಂಬುದರ ಮೇಲೆ ನಿಗಾ ನೆಟ್ಟಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…