ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ.
ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್ ಟೈಲ್ಸ್ ಮತ್ತು ಗ್ರಾನೆಟ್ ಮಳಿಗೆಗೆ ಪುರಸಭೆಯಿಂದ ಅನುಮತಿ ಪಡೆಯಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಭಾಗವಾಗಿ, ಮೊದಲ ಕಂತಾಗಿ ₹50 ಸಾವಿರ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಜೆ. ತಿರುಮಲೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಸಿ. ಲೋಕೇಶ್, ವಿಜಯಭಾಸ್ಕರ್ ಹಾಗೂ ಕಾನ್ಸ್ಟೆಬಲ್ಗಳಾದ ರವಿಚಂದ್ರ, ಮಲ್ಲಿಕಾರ್ಜುನ್, ಚಂದನ್ ಕುಮಾರ್, ಪ್ರಸಾದ್ ಎಂ. ಚಂದ್ರಶೆಟ್ಟಿ, ಮಜೀಬ್ ಖಾನ್ ಮತ್ತು ಶ್ರೀಧರ್ ಅವರು ಭಾಗವಹಿಸಿದ್ದರು.
ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪುರಸಭೆಯಲ್ಲಿನ ಆಡಳಿತ ಕ್ರಮಗಳ ಮೇಲೂ ಸಾರ್ವಜನಿಕರಿಂದ ಪ್ರಶ್ನೆಗಳು ಮೂಡುತ್ತಿವೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…