ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ.
ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್ ಟೈಲ್ಸ್ ಮತ್ತು ಗ್ರಾನೆಟ್ ಮಳಿಗೆಗೆ ಪುರಸಭೆಯಿಂದ ಅನುಮತಿ ಪಡೆಯಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಭಾಗವಾಗಿ, ಮೊದಲ ಕಂತಾಗಿ ₹50 ಸಾವಿರ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಜೆ. ತಿರುಮಲೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಸಿ. ಲೋಕೇಶ್, ವಿಜಯಭಾಸ್ಕರ್ ಹಾಗೂ ಕಾನ್ಸ್ಟೆಬಲ್ಗಳಾದ ರವಿಚಂದ್ರ, ಮಲ್ಲಿಕಾರ್ಜುನ್, ಚಂದನ್ ಕುಮಾರ್, ಪ್ರಸಾದ್ ಎಂ. ಚಂದ್ರಶೆಟ್ಟಿ, ಮಜೀಬ್ ಖಾನ್ ಮತ್ತು ಶ್ರೀಧರ್ ಅವರು ಭಾಗವಹಿಸಿದ್ದರು.
ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪುರಸಭೆಯಲ್ಲಿನ ಆಡಳಿತ ಕ್ರಮಗಳ ಮೇಲೂ ಸಾರ್ವಜನಿಕರಿಂದ ಪ್ರಶ್ನೆಗಳು ಮೂಡುತ್ತಿವೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…