ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ.
ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್ ಟೈಲ್ಸ್ ಮತ್ತು ಗ್ರಾನೆಟ್ ಮಳಿಗೆಗೆ ಪುರಸಭೆಯಿಂದ ಅನುಮತಿ ಪಡೆಯಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಭಾಗವಾಗಿ, ಮೊದಲ ಕಂತಾಗಿ ₹50 ಸಾವಿರ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಜೆ. ತಿರುಮಲೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಸಿ. ಲೋಕೇಶ್, ವಿಜಯಭಾಸ್ಕರ್ ಹಾಗೂ ಕಾನ್ಸ್ಟೆಬಲ್ಗಳಾದ ರವಿಚಂದ್ರ, ಮಲ್ಲಿಕಾರ್ಜುನ್, ಚಂದನ್ ಕುಮಾರ್, ಪ್ರಸಾದ್ ಎಂ. ಚಂದ್ರಶೆಟ್ಟಿ, ಮಜೀಬ್ ಖಾನ್ ಮತ್ತು ಶ್ರೀಧರ್ ಅವರು ಭಾಗವಹಿಸಿದ್ದರು.
ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪುರಸಭೆಯಲ್ಲಿನ ಆಡಳಿತ ಕ್ರಮಗಳ ಮೇಲೂ ಸಾರ್ವಜನಿಕರಿಂದ ಪ್ರಶ್ನೆಗಳು ಮೂಡುತ್ತಿವೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…