ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ.
ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್ ಟೈಲ್ಸ್ ಮತ್ತು ಗ್ರಾನೆಟ್ ಮಳಿಗೆಗೆ ಪುರಸಭೆಯಿಂದ ಅನುಮತಿ ಪಡೆಯಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಭಾಗವಾಗಿ, ಮೊದಲ ಕಂತಾಗಿ ₹50 ಸಾವಿರ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್ಪಿ ಜೆ. ತಿರುಮಲೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಸಿ. ಲೋಕೇಶ್, ವಿಜಯಭಾಸ್ಕರ್ ಹಾಗೂ ಕಾನ್ಸ್ಟೆಬಲ್ಗಳಾದ ರವಿಚಂದ್ರ, ಮಲ್ಲಿಕಾರ್ಜುನ್, ಚಂದನ್ ಕುಮಾರ್, ಪ್ರಸಾದ್ ಎಂ. ಚಂದ್ರಶೆಟ್ಟಿ, ಮಜೀಬ್ ಖಾನ್ ಮತ್ತು ಶ್ರೀಧರ್ ಅವರು ಭಾಗವಹಿಸಿದ್ದರು.
ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪುರಸಭೆಯಲ್ಲಿನ ಆಡಳಿತ ಕ್ರಮಗಳ ಮೇಲೂ ಸಾರ್ವಜನಿಕರಿಂದ ಪ್ರಶ್ನೆಗಳು ಮೂಡುತ್ತಿವೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…