ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರವಾನಗಿ ಪಡೆದ ಸರ್ವೆಯರ್ ಹಾಗೂ ಜಿಲ್ಲಾ ಪಂಚಾಯತ್ ಕೆಡಿಪಿ ನಾಮನಿರ್ದೇಶಿತ ಸದಸ್ಯ ಅಶೋಕ್ ಅವರನ್ನು ಲಂಚ ಪಡೆಯುವ ಸಂದರ್ಭ ಲೋಕಾಯುಕ್ತ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಹುಲ್ಲೆಹಳ್ಳಿ ವೆಂಕಟೇಶ್ ಎಂಬವರು ನೀಡಿದ ಖಚಿತ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ವೆಂಕಟೇಶ್ ಅವರ ಕಡೂರು ತಾಲೂಕಿನ ಹುಲ್ಲೆಹಳ್ಳಿ ಗ್ರಾಮದ ಜಮೀನಿನ ಹಳೆಯ ನಕ್ಷೆ ಸರಿಯಾಗಿರಲಿಲ್ಲ. ಇದನ್ನು ಸರಿಪಡಿಸಲು ಮತ್ತು ಹೊಸ ನಕ್ಷೆ ತಯಾರಿಸಲು ಅವರು ಕಡೂರು ಉಪ ವಿಭಾಗದ ಎಡಿಎಲ್ಆರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆಯ ಸಂದರ್ಭದಲ್ಲಿ ಸರ್ವೆಯರ್ ಅಶೋಕ್, ವೆಂಕಟೇಶ್ ಅವರ ಸಹೋದರನಿಂದ ಮೊದಲು ₹1,200 ಪಡೆದು, ಮುಂದಿನ ಹಂತದಲ್ಲಿ ಕಡತ ತಯಾರಿಸಲು ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ರಕಂ ಕಡಿಮೆ ಮಾಡಿಸುವ ಪ್ರಯತ್ನದ ನಂತರ, ಕೊನೆಗೆ ₹4,000 ನೀಡಲು ಒಪ್ಪಿಕೊಂಡಿದ್ದರು.
ಸೋಮವಾರ ಸಂಜೆ, ಸರ್ವೆ ಇಲಾಖೆಯ ಕಚೇರಿಯಲ್ಲಿ ವೆಂಕಟೇಶ್ ಅವರಿಂದ ₹4,000 ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಅಶೋಕ್ ಬಂಧಿತನಾದರು. ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮತ್ತು ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ನಡೆಸಲಾಯಿತು. ತಂಡದಲ್ಲಿ ಮಲ್ಲಿಕಾರ್ಜುನ್, ಚಂದ್ರಶೇಖರ್, ಮಹೇಶ್, ವೇದಾವತಿ, ಪ್ರಸಾದ್, ಚಂದ್ರಶೆಟ್ಟಿ ಮತ್ತು ಮುಜೀಬ್ ಸೇರಿದಂತೆ ಹಲವಾರು ಅಧಿಕಾರಿಗಳು ಭಾಗವಹಿಸಿದ್ದರು.
ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…