ಗದಗದಲ್ಲಿ ಲೋಕಾಯುಕ್ತದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವಕ್ಫ್ ಇಲಾಖೆಯ ಅಧಿಕಾರಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಮುಳಗುಂದದ ಮಸೀದಿಗೆ ಅನುದಾನ ಬಿಡುಗಡೆ ಸಂಬಂಧಿತ ದಾಖಲೆಗಳಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಅಧಿಕಾರಿಯೊಬ್ಬರು ಲಂಚ ಕೇಳಿದ್ದಾಗಿ ತಿಳಿದು ಬಂದಿದೆ.
ವಕ್ಫ್ ಇಲಾಖೆಯ ಅಧಿಕಾರಿ ರೆಹಮತ್ತುಲ್ಲಾ ಪೆಂಡಾರಿ ಅವರು, ಎಸ್ ಎ ಮಕಾನದಾರ್ ಎಂಬ ವ್ಯಕ್ತಿಯಿಂದ ಹಣಕಾಸು ಲೆಕ್ಕಪತ್ರಗಳಿಗೆ ಅನುಮೋದನೆ ನೀಡಲು ಹಣಕಾಸು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ಎಸ್ ಎ ಮಕಾನದಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲೋಕಾಯುಕ್ತದ ತಂಡ ಪ್ಲಾನ್ ಮಾಡಿ ಅಧಿಕಾರಿಗೆ ಲಂಚ ನೀಡುವ ವೇಳೆಯಲ್ಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ.
ಪ್ರಸ್ತುತ ಬಂಧಿತ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರಿಂದ ಒತ್ತಾಯ ವ್ಯಕ್ತವಾಗಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…