ಗದಗದಲ್ಲಿ ಲೋಕಾಯುಕ್ತದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವಕ್ಫ್ ಇಲಾಖೆಯ ಅಧಿಕಾರಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಮುಳಗುಂದದ ಮಸೀದಿಗೆ ಅನುದಾನ ಬಿಡುಗಡೆ ಸಂಬಂಧಿತ ದಾಖಲೆಗಳಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಅಧಿಕಾರಿಯೊಬ್ಬರು ಲಂಚ ಕೇಳಿದ್ದಾಗಿ ತಿಳಿದು ಬಂದಿದೆ.
ವಕ್ಫ್ ಇಲಾಖೆಯ ಅಧಿಕಾರಿ ರೆಹಮತ್ತುಲ್ಲಾ ಪೆಂಡಾರಿ ಅವರು, ಎಸ್ ಎ ಮಕಾನದಾರ್ ಎಂಬ ವ್ಯಕ್ತಿಯಿಂದ ಹಣಕಾಸು ಲೆಕ್ಕಪತ್ರಗಳಿಗೆ ಅನುಮೋದನೆ ನೀಡಲು ಹಣಕಾಸು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ಎಸ್ ಎ ಮಕಾನದಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲೋಕಾಯುಕ್ತದ ತಂಡ ಪ್ಲಾನ್ ಮಾಡಿ ಅಧಿಕಾರಿಗೆ ಲಂಚ ನೀಡುವ ವೇಳೆಯಲ್ಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ.
ಪ್ರಸ್ತುತ ಬಂಧಿತ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರಿಂದ ಒತ್ತಾಯ ವ್ಯಕ್ತವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…