ವಡಗೇರಾ (ಯಾದಗಿರಿ ಜಿಲ್ಲೆ): ಭೂ ವಿವಾದದ ಪ್ರಕರಣದಲ್ಲಿ ಪರಿಹಾರ ನೀಡುವ ಹೆಸರಿನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಕೇಸ್ ವರ್ಕರ್ ಒಬ್ಬನು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶುಕ್ರವಾರ ಸಂಜೆ ನಗರದಲ್ಲಿ ನಡೆದಿದೆ.
ವಡಗೇರಾ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣಕುಮಾರ ಎಂಬುವವರು, ಭೂ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಬಾಕಿಯಿದ್ದ ಪ್ರಕರಣವೊಂದನ್ನು ವಿಲೇವಾರಿ ಮಾಡಿಕೊಡುವ ನೆಪದಲ್ಲಿ ದೂರುದಾರ ಮಹ್ಮದ್ ಸಲಿಂ ಮುಲ್ಲಾದವರಿಂದ ಲಂಚ ಬೇಡಿದ್ದರು. ಈ ಸಂಬಂಧ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪಥಕ ರೂಪಿಸಿ ದಾಳಿ ನಡೆಸಿದರು.
ಸ್ನೇಹಪೂರ್ಣವಾಗಿ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ಮಾಡಿದ ಅಧಿಕಾರಿಗಳು, ಪ್ರವೀಣಕುಮಾರರನ್ನು ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಯಾದಗಿರಿ ಲೋಕಾಯುಕ್ತ ಎಸ್.ಪಿ ಉಮೇಶ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಜೆ.ಎಚ್ ಇನಾಂದಾರ್, ಪಿಎಸ್ಐ ಸಿದ್ದರಾಯ ಬಳೂರ್ಗಿ ಹಾಗೂ ತಂಡದ ಇತರ ಸದಸ್ಯರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…