ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೊಂದು ಭ್ರಷ್ಟಾಚಾರದ ಪ್ರಕರಣ ಬೆಳಕಿಗೆ ಬಂದಿದ್ದು, ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಲಂಚಕ್ಕೆ ಓರೆಯಾದ ತಾಂತ್ರಿಕ ಸಹಾಯಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಅಜ್ಜಂಪುರ ತಾ.ಪಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೆಂಕಿಬಾಯಿ ಎಂಬವರು, ಕೃಷಿ ಹೊಂಡದ ಕಾಮಗಾರಿ ಕೈಗೊಳ್ಳುವ ಸಂಬಂಧ ನಾಗವಂಗಲದ ಕೃಷಿಕನೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ರೈತನಿಂದ ರೂ. 5500 ರಷ್ಟು ಹಣ ಪಡೆಯುತ್ತಿದ್ದ ವೇಳೆ, ಲೋಕಾಯುಕ್ತ ವಿಭಾಗದ ಅಧಿಕಾರಿಗಳು ತಮ್ಮ ಪೂರ್ವ ಕಾರ್ಯಯೋಜನೆಯಂತೆ ದಾಳಿ ನಡೆಸಿ ವೆಂಕಿಬಾಯಿಯನ್ನು ಸೆರೆಹಿಡಿದಿದ್ದಾರೆ.
ಲಂಚದ ಹಣವನ್ನು ಕಚೇರಿಯೊಳಗೇ ಸ್ವೀಕರಿಸುತ್ತಿದ್ದ ಸಮಯದಲ್ಲಿ ಅಧಿಕಾರಿಗಳ ದಾಳಿ ನಡೆದಿದೆ. ಹಣದ ಗುರುತು ಸಾಬೀತಾಗಿ, ಸ್ಥಳದಲ್ಲೇ ಬಂಧನಕ್ಕೆ ಒಳಗಾದ ವೆಂಕಿಬಾಯಿ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಯುತ್ತಿದೆ.
ಈ ಕಾರ್ಯಾಚರಣೆಗೆ ಲೋಕಾಯುಕ್ತ ಡಿವೈಎಸ್ಪಿ ಜೆ.ಜೆ. ತಿರುಮಲೇಶ್ ಅವರ ನೇತೃತ್ವದ ತಂಡ ಮುಂದಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗೆ ಮತ್ತೊಂದು ಹೆಜ್ಜೆ ಇಟ್ಟಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…