Categories: CorruptionLatest

ಬಳ್ಳಾರಿಯಲ್ಲಿ ಲೋಕಾಯುಕ್ತ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ‘ಕುಬೇರ’ನ ಖಜಾನೆ!

ಗಣಿ ನಾಡು ಬಳ್ಳಾರಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರಿಗೆ ಭಾರೀ ಶಾಕ್ ಎದುರಾಗಿದೆ. ಇಂದು ನಸುಕಿನ ಜಾವವೇ ಲೋಕಾಯುಕ್ತ ಅಧಿಕಾರಿಗಳು ಶಿವಣ್ಣ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಅಕ್ರಮ ಆಸ್ತಿಗಳ ಭಂಡಾರವನ್ನು ಪತ್ತೆಹಚ್ಚಿದ್ದಾರೆ.

ದಾಳಿಯ ವೇಳೆ ಪತ್ತೆಯಾದ ಆಸ್ತಿಗಳ ಪ್ರಮಾಣ ಅಧಿಕಾರಿಗಳನ್ನು ಸಹ ಅಚ್ಚರಿಗೊಳಿಸಿದೆ. ಬಳ್ಳಾರಿ ನಗರದಲ್ಲೇ ಶಿವಣ್ಣ ಅವರು ಹೊಂದಿರುವ ಆಸ್ತಿಗಳ ಪಟ್ಟಿ ದೊಡ್ಡದಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ 14 ಸೈಟ್‌ಗಳು ಹಾಗೂ ಮೂರು ಐಷಾರಾಮಿ ಮನೆಗಳು ಪತ್ತೆಯಾಗಿವೆ. ಇದಲ್ಲದೆ, ಬಳ್ಳಾರಿ ಜಿಲ್ಲೆ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 44 ಎಕರೆ ಕೃಷಿ ಭೂಮಿಯನ್ನು ಹೊಂದಿರುವುದು ದಾಖಲೆಗಳಿಂದ ಬಹಿರಂಗವಾಗಿದೆ.

ಶೋಧ ಕಾರ್ಯದ ವೇಳೆ ಮನೆದಲ್ಲಿ 600 ಗ್ರಾಂ ಚಿನ್ನಾಭರಣಗಳು ಸಿಕ್ಕಿವೆ. ಜೊತೆಗೆ, 8.5 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಬ್ಯಾಂಕ್ ಖಾತೆ ಪರಿಶೀಲನೆಯಾಗಿಯೂ ಸುಮಾರು 20 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ.

ಇದರೊಂದಿಗೆ ಶಿವಣ್ಣ ಅವರು ಕುಟುಂಬಸ್ಥರು ಮತ್ತು ಇತರರ ಹೆಸರಿನಲ್ಲಿ ಬೇನಾಮಿ ಆಸ್ತಿಗಳನ್ನು ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ಮತ್ತಷ್ಟು ಗಂಭೀರಗೊಂಡಿದೆ. ದಾಳಿಯ ವೇಳೆ ಸಿಕ್ಕಿರುವ ಪ್ರಮುಖ ದಾಖಲೆಗಳು, ಡೈರಿಗಳು ಮತ್ತು ಇತರೆ ಮಾಹಿತಿ ಆಧರಿಸಿ ಅಧಿಕಾರಿಗಳು ಆಸ್ತಿ ಮೂಲವನ್ನು ಪರಿಶೀಲಿಸುತ್ತಿದ್ದಾರೆ.

ಲೋಕಾಯುಕ್ತ ತಂಡವು ಇನ್ನೂ ಶೋಧ ಕಾರ್ಯ ಮುಂದುವರೆಸಿದ್ದು, ಶಿವಣ್ಣ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳ ಮೇಲೂ ನಿಗಾ ಇಡಲಾಗಿದೆ. ಮುಂದಿನ ದಿನಗಳಲ್ಲಿ ಆಸ್ತಿಯ ಒಟ್ಟು ಮೌಲ್ಯ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಗಮನಾರ್ಹವಾಗಿ, ಶಿವಣ್ಣ ವಿರುದ್ಧ ಈಗಾಗಲೇ 10ಕ್ಕೂ ಹೆಚ್ಚು ಭ್ರಷ್ಟಾಚಾರ ಮತ್ತು ಅಕ್ರಮ ಆದಾಯ ಸಂಬಂಧಿತ ದೂರುಗಳು ಲೋಕಾಯುಕ್ತರಿಗೆ ಸಲ್ಲಿಕೆಯಾಗಿದ್ದವು. ಕಳೆದ ಸುಮಾರು ಹತ್ತು ವರ್ಷಗಳಿಂದ ಒಂದೇ ಸ್ಥಳದಲ್ಲಿ ವರ್ಗಾವಣೆ ಆಗದೆ ಸೇವೆ ಸಲ್ಲಿಸುತ್ತಿದ್ದ ಅವರು, ತಮ್ಮ ಪ್ರಭಾವವನ್ನು ಬಳಸಿ ವರ್ಗಾವಣೆ ತಪ್ಪಿಸಿಕೊಂಡಿದ್ದರು ಎಂಬ ಆರೋಪಗಳೂ ಕೇಳಿಬಂದಿವೆ.

ಈ ದಾಳಿ ಬಳಿಕ, ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮತ್ತೆ ಚರ್ಚೆ ಜೋರಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago