Latest

ಲಂಚದ ಲೀಲೆಗೆ ಲಾಕ್‌ ಹಾಕಿದ ಲೋಕಾಯುಕ್ತ: ಕೋಲಾರದಲ್ಲಿ ಅಧಿಕಾರಿಗಳ ಬಲೆಗೆ

ಕೋಲಾರ: ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ  ಅಧಿಕಾರಿಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಬೇತಮಂಗಲ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಶಿವಕುಮಾರ್, ಸಹಾಯಕ ಎಂಜಿನಿಯರ್ (ಎಇ) ರಶ್ಮಿ ಹಾಗೂ ಗುತ್ತಿಗೆ ನೌಕರ ರಾಮಚಂದ್ರಗೌಡರನ್ನು ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಿದ್ದಾರೆ.

ಪ್ರಕರಣದ ಪ್ರಕಾರ, ಕೆಜಿಎಫ್ ಮೂಲದ ಗುತ್ತಿಗೆದಾರ ಪ್ರವೀಣ್ ಅವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಅವರ ಪ್ರಕಾರ, ವಾಟರ್ ವರ್ಕ್ಸ್ ಪಂಪ್ ಹೌಸ್‌ಗೆ 11 ಕೆ.ವಿ ವಿದ್ಯುತ್ ಲೈನ್ ಪುನರ್ ಸ್ಥಾಪನೆಗೆ ಸಂಬಂಧಪಟ್ಟಂತೆ ಯಾವುದೇ ಕಾಮಗಾರಿ ನಡೆಯದಿದ್ದರೂ ಸಹ, ₹5 ಲಕ್ಷ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಮಧ್ಯೆ ₹2.27 ಲಕ್ಷ ಲಂಚ ಹಣವನ್ನು ಪಡೆಯುವಾಗ ಅಧಿಕಾರಿಗಳು ಲಂಚಕುರ್ಮಿಯಲ್ಲಿ ಸಿಕ್ಕಿಬಿದ್ದರು.

ಲೋಕಾಯುಕ್ತ ಪೋಲೀಸರು ಬೇತಮಂಗಲದ ಉಪವಿಭಾಗ ಕಚೇರಿ ಹಾಗೂ ಬೆಂಗಳೂರು ನಾಗರಭಾವಿಯಲ್ಲಿರುವ ಎಇಇ ಶಿವಕುಮಾರ್ ನಿವಾಸದಲ್ಲಿ ಸಮಂತರಾಗಿ ದಾಳಿ ನಡೆಸಿದರು. ದಾಳಿಯಲ್ಲಿ ಸಾಂದರ್ಭಿಕ ದಾಖಲೆಗಳು, ಲೆಕ್ಕಪತ್ರಗಳು ಹಾಗೂ ಮೊತ್ತದ ಹಣವನ್ನೂ ವಶಪಡಿಸಿಕೊಳ್ಳಲಾಗಿದೆ.

ಈ ಶೋಧ ಕಾರ್ಯಾಚರಣೆಯನ್ನು ಜಿಲ್ಲಾ ಲೋಕಾಯುಕ್ತ ಎಸ್‌ಪಿ ಆಂತೋಣಿ ಜಾನ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಸುಧೀರ್ ಮತ್ತು ಇನ್‌ಸ್ಪೆಕ್ಟರ್ ರೇಣುಕಾ ನಡೆಸಿದರು. ಬೆಂಗಳೂರಿನ ಮನೆಯ ಶೋಧ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಆಂಜಿನಪ್ಪ, ಸಿಬ್ಬಂದಿ ದೇವ್, ನಾಗವೇಣಿ ಮತ್ತು ಯೋಶೋಧಾ ಭಾಗವಹಿಸಿದ್ದರು.

ಈ ಪ್ರಕರಣದಿಂದ ನಗರ ನೀರು ಸರಬರಾಜು ಇಲಾಖೆಯೊಳಗಿನ ಭ್ರಷ್ಟಾಚಾರದ ಮತ್ತೊಂದು ಮುಖ ಮಂಗಳವಾಗಿದೆ. ಮುಂದಿನ ತನಿಖೆಯಲ್ಲಿ ಇನ್ನಷ್ಟು ವಿವರಗಳು ಹೊರಬೀಳುವ ನಿರೀಕ್ಷೆಯಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago