ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡು ಮಂದಿ ಸಿಬ್ಬಂದಿ ಲಂಚವೊತ್ತಾಯ ಪ್ರಕರಣದಲ್ಲಿ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯ ಬಡಿಗೇರ್ ಬಂಧಿತರು.
ಆಂಗನವಾಡಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶಕುಂತಲಾ ಕಾಂಬಳೆ ಎಂಬುವವರಿಂದ ಹಣ ಬೇಡಿಕೆ ಇಟ್ಟಿರುವ, ಒಟ್ಟು 30,000 ರೂಪಾಯಿ ಲಂಚದಂತೆ ಒತ್ತಾಯಿಸಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪೈಕಿ ಮೊದಲ ಹಂತದ 15,000 ರೂಪಾಯಿ ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಸ್ಥಳದಲ್ಲೇ ಬಂಧಿಸಿದ್ದಾರೆ.
ದಾಳಿ ವೇಳೆ ಸೌಮ್ಯ ಬಡಿಗೇರ್ ಹೊತ್ತಿನಲ್ಲಿ ಅಸ್ವಸ್ಥರಾಗಿದ್ದು, ತಕ್ಷಣವೇ ಸ್ಥಳೀಯ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಇಬ್ಬರನ್ನೂ ವಿಚಾರಣೆಗಾಗಿ ಲೋಕಾಯುಕ್ತ ಅಧಿಕಾರಿಗಳ ವಶದಲ್ಲಿಡಲಾಗಿದೆ.
ಈ ಘಟನೆ ಬಳಿಕ ಇಲಾಖೆಯೊಳಗಿನ ಲಂಚ ವ್ಯಾಪಾರದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು, ಇಲಾಖೆಯ ಶುದ್ಧೀಕರಣದ ಅಗತ್ಯ ಮತ್ತೊಮ್ಮೆ ಎತ್ತಿ ಹಿಡಿದಿದೆ
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…