ಬೆಂಗಳೂರು: ಭೂಮಾಪನ ಇಲಾಖೆಯ ಸರ್ವೆ ಸೂಪರ್ವೈಸರ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಜಿ. ಸುರೇಶ್ ಬಾಬು ಅವರ ವಿರುದ್ಧ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಏಕಕಾಲದಲ್ಲಿ ಐದು ಕಡೆಗಳಲ್ಲಿ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಹಾಗೂ ಜಮೀನಿನ ಪೋಡಿ ಸಂಬಂಧ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದಾಳಿಯ ಪ್ರಮುಖ ಮಾಹಿತಿ:
ನಗದು ಮತ್ತು ನಕಲಿ ದಾಖಲೆಗಳನ್ನು ಪತ್ತೆಹಚ್ಚಿದ ಈ ದಾಳಿಯಲ್ಲಿ, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ವಿ. ಧನಂಜಯ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿತು. ಸುರೇಶ್ ಬಾಬು ಅವರ ಬೆಂಗಳೂರು ನಗರದಲ್ಲಿರುವ ಹಾರೋಹಳ್ಳಿ ರಸ್ತೆಯ ಜಯನಗರ 9ನೇ ಕ್ರಾಸ್ ಬಳಿಯ ನಿವಾಸವನ್ನು ಶೋಧಿಸಲಾಗಿದ್ದು, ₹7.50 ಲಕ್ಷ ನಗದು ಮತ್ತು ಹಲವಾರು ಪ್ರಮುಖ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.
ಹೊಸಕೋಟೆಯ ರಿಂಗ್ ರಸ್ತೆ ಬಳಿ ಇರುವ ಅವರ ಫ್ಯಾಕ್ಟರಿಯ ಅತಿಥಿ ಗೃಹದಲ್ಲಿ ಕೂಡ ಪೊಲೀಸರು ಶೋಧ ನಡೆಸಿ, ಜಮೀನಿನ ಪೋಡಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಪತ್ತೆ ಹಚ್ಚಿದ್ದಾರೆ.
ಭೂಮಾಪನ ಕಚೇರಿ ಸಹ ಶೋಧ
ಭೂಮಾಪನ ಇಲಾಖೆಯ ಕಚೇರಿಯಲ್ಲೂ ಲೋಕಾಯುಕ್ತ ತಂಡದ ದಾಳಿ ನಡೆದಿದೆ. ಅಲ್ಲದೆ, ಪರವಾನಗಿ ಸರ್ವೆಯರ್ಗಳಾದ ಸಂದೀಪ್ ಮತ್ತು ಸುನಿಲ್ ಅವರ ಬೆಂಗಳೂರು ನಗರದಲ್ಲಿರುವ ಕೋಟೆ ಬಡಾವಣೆ ಮತ್ತು ಧರ್ಮರಾಯನಗರ ಬಡಾವಣೆಯ ನಿವಾಸಗಳನ್ನೂ ಶೋಧಿಸಲಾಗಿದೆ. ಈ ಸಂದರ್ಭದಲ್ಲಿ ಕೆಲ ಮಹತ್ವದ ದಾಖಲೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದ್ದು, ಪತ್ತೆಯಾಗಿರುವ ದಾಖಲೆಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…