ಚಿಕ್ಕಬಳ್ಳಾಪುರ, ಜು. 29 – ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅಂಜನಮೂರ್ತಿ ವಿರುದ್ಧ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆಯಿಂದಲೇ ಮನೆ ಮತ್ತು ಕಚೇರಿಯಲ್ಲಿ ಸಮಂತರ ದಾಳಿ ನಡೆಸಿದ್ದಾರೆ.
ಈ ದಾಳಿಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಬಸವರಾಜು ನೇತೃತ್ವ ವಹಿಸಿದ್ದರು. ತಂಡವು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಂಜನಮೂರ್ತಿ ಅವರ ಗೌರಿಬಿದನೂರು ನಿವಾಸಕ್ಕೆ ಆಗಮಿಸಿ ಶೋಧ ಕಾರ್ಯ ಆರಂಭಿಸಿತು. ಕೆಲವೇ ಗಂಟೆಗಳಲ್ಲಿ ಮನೆ ಪರಿಶೀಲನೆ ಪೂರ್ಣಗೊಂಡ ನಂತರ, ಅಧಿಕಾರಿಗಳು ಅವರ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆಗೆ ಜುಟರಾದರು.
ಈ ನಡುವೆ ಬೆಂಗಳೂರು ಯಲಹಂಕ, ಜಕ್ಕೂರು ಹಾಗೂ ತೂಮಕೂರಿನ ಮಧುಗಿರಿಯಲ್ಲಿ ಇರುವ ಅಂಜನಮೂರ್ತಿ ಅವರಿಗೆ ಸಂಬಂಧಿಸಿದ ಬೇರೆ ಬೇರೆ ಮನೆಗಳ ಮೇಲೆಯೂ ಸಮಾನಾಂತರ ದಾಳಿ ನಡೆದಿದೆ. ಈ ದಾಳಿ ಓರ್ವ ಸರ್ಕಾರಿ ಉದ್ಯೋಗಿಯ ಆಸ್ತಿ ಮತ್ತು ದಾಖಲೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು, ಅಕ್ರಮ ಸಂಪತ್ತಿನ ಸುಳಿವು ಹುಡುಕಲು ಪ್ರಾರಂಭವಾಗಿದೆ.
ಆದಾಗ್ಯೂ, ಅಧಿಕಾರಿಗಳು ಇತ್ತುವರೆಗೆ ಸಿಕ್ಕಿರುವ ದಾಖಲೆಗಳು ಅಥವಾ ವಶಪಡಿಸಿಕೊಂಡ ಸಂಪತ್ತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಲೋಕಾಯುಕ್ತ ಇಲಾಖೆ ಇನ್ನೂ ತನಿಖೆ ಮುಂದುವರಿಸುತ್ತಿದ್ದು, ಹೆಚ್ಚಿನ ವಿವರಗಳು ಮುಂದೆ ಲಭ್ಯವಾಗುವ ಸಾಧ್ಯತೆ ಇದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…